Webdunia - Bharat's app for daily news and videos

Install App

ರಾಜ್ಯ ಸುತ್ತಿ ರೈತರ ಕಣ್ಣೀರು ಒರೆಸುವೆ ಎಂದ ಸಚಿವ

Webdunia
ಶನಿವಾರ, 15 ಫೆಬ್ರವರಿ 2020 (18:24 IST)
ರಾಜ್ಯದ ಉದ್ದಗಲಕ್ಕೂ ಸಂಚರಿಸುವುದರೊಂದಿಗೆ ಒಬ್ಬ ರೈತನ ಮಗನಾಗಿ ಕೆಲಸ ಮಾಡುವೆ.

ಹೀಗಂತ ರಾಜ್ಯದ ಸಚಿವರೊಬ್ಬರು ಹೇಳಿದ್ದಾರೆ. ಕೃಷಿ ಸಚಿವನಾಗಿ ರೈತರ ಕಷ್ಟ ನಷ್ಟಗಳಿಗೆ ಸ್ಪಂದಿಸುವುದರೊಂದಿಗೆ ಅವರ ಕಣ್ಣೀರನ್ನು ಒರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಅಂತ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಸ್ವ ಕ್ಷೇತ್ರ ಹಿರೇಕೆರೂರಿಗೆ ಆಗಮಿಸಿದ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು. ಕೃಷಿ ಇಲಾಖೆಯಲ್ಲಿ ಹಲವಾರು ಸವಾಲುಗಳೊಂದಿಗೆ ಅನೇಕ ಬೇಡಿಕೆಗಳಿವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತ ಮುಂಖಡರ ಸಭೆ ಕರೆದು ಅವರ ಸಮಸ್ಯೆ ಆಲಿಸಿದ್ದಾರೆ. ಬಜೆಟ್ ನಲ್ಲಿ ರೈತರ ಪರವಾಗಿ ಯೋಜನೆ ರೂಪಿಸಲು ಚಿಂತನೆ ನಡೆಸಿದ್ದಾರೆ ಎಂದರು.

ಕೃಷಿ ಸಮ್ಮಾನ್ ಯೋಜನೆಯಲ್ಲಿ ಅನೇಕ ರೈತರ ಹೆಸರುಗಳು ಕೈಬಿಟ್ಟು ಹೋಗಿದ್ದನ್ನು ಮುಂದಿನ  10 ದಿನಗಳಲ್ಲಿ ಸರಿ ಪಡಿಸಲಾಗ್ತದೆ.  1.5 ಲಕ್ಷ ಜನ ರೈತರಿಗೆ ಯೋಜನೆ ತಲುಪುವಂತೆ ಅಧಿಕಾರಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments