ಕೃಷಿಯೊಂದಿಗೆ ಅರಣ್ಯ ಬೆಳೆಸಿ, ಹಸಿರು ಕರ್ನಾಟಕಕ್ಕೆ ಸಹಕರಿಸಿ ಎಂದ ಸಚಿವ

Webdunia
ಮಂಗಳವಾರ, 16 ಅಕ್ಟೋಬರ್ 2018 (19:38 IST)
ರಾಜ್ಯದಲ್ಲಿ ಅರಣ್ಯ ಪ್ರದೇಶವನ್ನು ವಿಸ್ತರಿಸುವ ಮೂಲಕ ಹಸಿರು ಕರ್ನಾಟಕ ಮಾಡಲು ರಾಜ್ಯ ಸರ್ಕಾರ ಪಣ ತೊಟ್ಟಿದೆ ಎಂದು ಸಚಿವ ಹೇಳಿದ್ದಾರೆ.

ರೈತ ಬಾಂಧವರು ಕೃಷಿ, ತೋಟಗಾರಿಕೆ ಬೆಳೆಯೊಂದಿಗೆ ಗಿಡ-ಮರಗಳನ್ನು ಬೆಳೆಸುವ ಮೂಲಕ ಹಸಿರು ಕರ್ನಾಟಕಕ್ಕೆ  ಸಹಕರಿಸಬೇಕು ಎಂದು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್. ಶಂಕರ ರೈತ ಸಮುದಾಯಕ್ಕೆ ಕರೆ ನೀಡಿದರು.
ಅರಣ್ಯ ಇಲಾಖೆ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡಕರ್ ಸಭಾಂಗಣದಲ್ಲಿ ಆಯೋಜಿಸಲಾದ “ವೃತ್ತ ಮಟ್ಟದ ಕೃಷಿ ಅರಣ್ಯ  ಕಾರ್ಯಾಗಾರ ”ವನ್ನು ಉದ್ಘಾಟಿಸಿ ಮಾತನಾಡಿದರು.

ಗಿಡ-ಮರಗಳನ್ನು ಬೆಳೆಸಲು ರೈತರಿಗೆ ಅನೇಕ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ಜಾರಿಗೊಳಿಸಿದ್ದು, ಇದರ ಪ್ರಯೋಜನವನ್ನು ಅನ್ನದಾತ ಪಡೆಯಬೇಕು. ಕೃಷಿ ಅರಣ್ಯ ಯೋಜನೆಗಳ ಕುರಿತು ಮಾಹಿತಿ ನೀಡಲು ಧಾರವಾಡ, ಮಂಡ್ಯದಲ್ಲಿಯೂ ಸಹ ಇದೇ ರೀತಿಯ ವೃತ್ತ ಮಟ್ಟದ ಕೃಷಿ ಅರಣ್ಯ ಕಾರ್ಯಾಗಾರ ಮಾಡಿ ಪ್ರಗತಿಪರ ರೈತರಿಂದ ರೈತ ಸಮುದಾಯಕ್ಕೆ ತಿಳುವಳಿಕೆ ನೀಡಲಾಗಿದೆ ಎಂದರು.

ರೈತರ ಆರ್ಥಿಕವಾಗಿ ಸದೃಢಗೊಳ್ಳಲು ಕುರಿ, ಕೋಳಿ ಸಾಕಾಣಿಕೆ, ಹೈನುಗಾರಿಕೆಯಂತಹ ಆದಾಯೋತ್ಪನ್ನ ಕೃಷಿ ಚಟುವಟಿಕೆ ಕೈಗೊಳ್ಳಬೇಕು. ರೈತ ಸಮುದಾಯದ ಒಳಿತಿಗಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳು ರೂಪಿಸಿದ್ದು, ರಾಜ್ಯ ಸರ್ಕಾರ ಅನ್ನದಾತನೊಂದಿಗೆ ಇದೆ. ಯಾವುದೇ ಕಾರಣಕ್ಕೂ ದೃತಿಗೆಡದೆ ಬದುಕು ಸಾಗಿಸಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments