Webdunia - Bharat's app for daily news and videos

Install App

ಸರಕಾರಿ ಅಧಿಕಾರಿಗಳ ಬ್ಯಾಗ್ ಒಳಗೆ ಕೈಹಾಕಿದ ಸಚಿವ

Webdunia
ಬುಧವಾರ, 16 ಅಕ್ಟೋಬರ್ 2019 (19:41 IST)
ಸರಕಾರಿ ಅಧಿಕಾರಿಗಳ ಬ್ಯಾಗ್ ನೊಳಗೆ ಕೈ ಹಾಕಿದ ರಾಜ್ಯದ ಸಚಿವರೊಬ್ಬರು ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು, ಸಿಬ್ಬಂದಿಗಳ ಬ್ಯಾಗ್ ಪರೀಶೀಲನೆ ನಡೆಸಿದ್ದಾರೆ ಕಂದಾಯ ಸಚಿವ ಆರ್.ಅಶೋಕ್.

ಪ್ರತಿಯೊಂದು ಕೆಲಸಕ್ಕೂ ಲಂಚ ನೀಡಬೇಕು, ಸರಿಯಾದ ಸಮಯಕ್ಕೆ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ತಿಂಗಳಿಗೆ ಒಬ್ಬರೂ ತಹಶೀಲ್ದಾರ್ ಬರುತ್ತಾರೆ ಹಾಗೂ ಕಛೇರಿ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮದ್ದೂರು ತಾಲ್ಲೂಕು ಕಛೇರಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಕಚೇರಿಯ ವಿವಿಧ ಶಾಖೆಗಳಿಗೆ ತೆರಳಿ ಸಿಬ್ಬಂದಿಗಳ ಬ್ಯಾಗ್, ಲಾಕರ್ ಟೇಬಲ್ ಗಳನ್ನು  ಪರಿಶೀಲನೆಗೆ ಸಚಿವರೇ ಸ್ವಯಂ ಮುಂದಾದ್ರು.

ಸಚಿವರು ತಪಾಸಣೆ ಮಾಡುತ್ತಿದ್ದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳ ಎದೆಯಲ್ಲಿ ನಡುಕ ಉಂಟಾಗಿತ್ತು. ನಂತರ  ಸಾರ್ವಜನಿಕರು ಸಚಿವರ ಎದುರಲ್ಲಿ ದೂರುಗಳ ಸುರಿಮಳೆಯನ್ನೇ ಹರಿಸಿದರು.

ಇದೇ ವೇಳೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ , ಜಿಲ್ಲಾಧಿಕಾರಿ ವೆಂಕಟೇಶ್ , ಅಪರ ಜಿಲ್ಲಾಧಿಕಾರಿ ಯೋಗೇಶ್ ಇತರೇ  ಅಧಿಕಾರಿಗಳು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments