Webdunia - Bharat's app for daily news and videos

Install App

ದೇವೇಗೌಡರ ಕುಟುಂಬವನ್ನು ಹೊಗಳುವ ಭರದಲ್ಲಿ ಎಡವಟ್ಟು ಹೇಳಿಕೆ ನೀಡಿದ ಸಚಿವ

Webdunia
ಶುಕ್ರವಾರ, 22 ಮಾರ್ಚ್ 2019 (09:17 IST)
ತುಮಕೂರು : ಜೆಡಿಎಸ್ ವರಿಷ್ಠ ಎಚ್‍.ಡಿ ದೇವೇಗೌಡರು ಚುನಾವಣೆ ಸ್ಪರ್ಧಿಸುವ ವಿಚಾರದ ಕುರಿತು ಮಾತನಾಡುವಾಗ ಸಣ್ಣ ಕೈಗಾರಿಕಾ ಸಚಿವ ಎಸ್‍.ಆರ್. ಶ್ರೀನಿವಾಸ್  ಅವರು ದೇವೇಗೌಡರ ಕುಟುಂಬವನ್ನು ಹೊಗಳುವ ಭರದಲ್ಲಿ ಎಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.


ಮೈತ್ರಿಗಾಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಒಮ್ಮತ ಮೂಡದ ಪರಿಣಾಮ ಇಂದು ಕಾಂಗ್ರೆಸ್ ನಾಯಕರ ಬೆಂಬಲ ಕೋರಿ ಸಚಿವ ಶ್ರೀನಿವಾಸ್ ಮಾಜಿ ಕಾಂಗ್ರೆಸ್ ಶಾಸಕರಾದ ರಫಿಕ್ ಅಹಮದ್ ಅವರ ಮನೆಗೆ ಭೇಟಿ ನೀಡಿ ಸಭೆ ನಡೆಸಿದ್ದರು. ಆ ವೇಳೆ ಬೆಂಗಳೂರು ಉತ್ತರದಲ್ಲಿ ಸೋಲುವ ಭೀತಿಯಿಂದ ತುಮಕೂರಿನಿಂದ ಸ್ಪರ್ಧೆ ಮಾಡುತ್ತಾ ಇದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್‍.ಆರ್ ಶ್ರೀನಿವಾಸ್  ಅವರು,’ ದೇವೇಗೌಡರ ಕುಟುಂಬ ರಾಕ್ಷಸ ಕುಟುಂಬ. ಅವರು ಯಾವುದಕ್ಕೂ ಅಂಜುವವರಲ್ಲ. ಸೋಲಲಿ-ಗೆಲ್ಲಲಿ ಹೋರಾಟ ಮಾಡೇ ಮಾಡುತ್ತಾರೆ ಎಂದು ದೊಡ್ಡಗೌಡರ ಕುಟುಂಬ ಹೊಗಳಲು ಹೋಗಿ ಎಡವಟ್ಟು ಮಾಡಿದ್ದಾರೆ.


ದೇವೇಗೌಡರು 60 ವರ್ಷದ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು ಬೀಳು ಕಂಡಿದ್ದಾರೆ. ಈ ಬಾರಿ ಅವರು ಎಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ. ಮಾಜಿ ಪ್ರಧಾನಿ ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಒತ್ತಡ ಹಾಕಿದ್ದೇವೆ. ನಮ್ಮ ಪಕ್ಷದಿಂದ ದೇವೇಗೌಡರೆ ಅಭ್ಯರ್ಥಿಯಾಗಿದ್ದು, 25 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments