ಬೆಳೆ ಹಾನಿ ಜಂಟಿ ಸಮೀಕ್ಷೆಗೆ ಸೂಚನೆ ಕೊಟ್ಟ ಸಚಿವ

Webdunia
ಶುಕ್ರವಾರ, 24 ಆಗಸ್ಟ್ 2018 (19:48 IST)
ರಾಜ್ಯದಲ್ಲಿ ಒಂದೆಡೆ ಭಾರಿ ಮಳೆ ಇದ್ದರೆ ಮತ್ತೊಂದೆಡೆ ಮಳೆಯಿಲ್ಲದೇ ಬೆಳೆ ಹಾನಿಗೆ ಒಳಗಾಗುತ್ತಿವೆ. ಹೀಗಾಗಿ ಬೆಳೆ ಹಾನಿ ಕುರಿತು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸುವಂತೆ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಲಬುರಗಿ ವಿಭಾಗ ಸೇರಿದಂತೆ ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ವಾಡಿಕೆಯಂತೆ ಈ ವರ್ಷ ಮಳೆಯ ಕೊರತೆಯಿದೆ.  ಬೆಳೆ ಹಾನಿಯ ಕುರಿತಂತೆ ಎಲ್ಲ ಜಿಲ್ಲೆಗಳಲ್ಲಿ ಶೀಘ್ರವೇ ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.  

ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಮೇ ಮತ್ತು ಜೂನ್‍ನಲ್ಲಿ ಉತ್ತಮ ಮಳೆಯಾಗಿತ್ತು. ಮುಂದೆಯೂ ಮಳೆ ಬರುವ ನಿರೀಕ್ಷೆಯಿಂದ ರೈತರು ಉದ್ದು, ಹೆಸರು, ಎಳ್ಳು, ತೊಗರಿ ಬಿತ್ತನೆ ಮಾಡಿದ್ದರು.  ಜಿಲ್ಲೆಯಲ್ಲಿ ಒಟ್ಟಾರೆ ಶೇ. 98ರಷ್ಟು ಬಿತ್ತನೆಯಾಗಿದ್ದು,  ಇದರಲ್ಲಿ ಬಿತ್ತನೆ ಮಾಡಲಾದ ಹೆಸರು, ಎಳ್ಳು, ಉದ್ದು ಬೆಳೆಗಳು ಮಳೆಯ ಅಭಾವದಿಂದ ಹಾಳಾಗಿದೆ.

ಇದಕ್ಕೆ ಪರ್ಯಾಯವಾಗಿ ಬೆಳೆ ಬೆಳೆಯಲು ಮುಂದೆ ಬರುವ ರೈತರಿಗೆ ಸಮರ್ಪಕವಾಗಿ ಬೀಜ ಮತ್ತು ಗೊಬ್ಬರವನ್ನು ಪೂರೈಸಲು ಕೂಡಲೇ ಅಗತ್ಯ ಪ್ರಮಾಣದ ದಾಸ್ತಾನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಳೆಯಿಲ್ಲದೇ ಈ ಭಾಗದ ರೈತರ ಬೆಳೆ ಹಾನಿಗೊಳಗಾಗುತ್ತಿದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments