ಕಾನೂನು ಬಾಹಿರ ತುಂಬಿದ ಮರಳು: ಸಿಎಂಗೆ ತಾಕತ್ತಿದ್ರೆ ನನ್ನ ವಿರುದ್ಧ ಕೇಸ್ ಹಾಕಲಿ ಎಂದ ಶಾಸಕ

Webdunia
ಸೋಮವಾರ, 19 ನವೆಂಬರ್ 2018 (16:10 IST)
ಅಲ್ಲಿ ಶಾಸಕರು ಕಾನೂನು ಬಾಹಿರ ಮರಳನ್ನು ತುಂಬಿದರು. ನೂರಾರು ಎತ್ತಿನಗಾಡಿ ಮೂಲಕ ಮರಳು ತುಂಬಿದರು. ತಾಕತ್ ಇದ್ದರೆ ಸಿಎಂ ನನ್ನ ವಿರುದ್ಧ ಕೇಸ್ ಹಾಕಲಿ ಎಂದು ಸವಾಲೆಸೆದರು.

ಕಾನೂನು ಬಾಹಿರ ಮರಳು ತುಂಬಿ ವಿಜಯೋತ್ಸವ ಆಚರಿಸಿದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಆಡಳಿತ ವೈಖರಿ ವಿರುದ್ಧ ಕಿಡಿಕಾರಿದರು. ಸವಾಲಿನಂತೆ ಮರಳು ತುಂಬಿದರು. ನೂರಾರು ಎತ್ತಿನಗಾಡಿ ಮೂಲಕ ಮರಳು ತುಂಬಿದ ರೇಣುಕಾಚಾರ್ಯ, ಜಿಲ್ಲಾಡಳಿತಕ್ಕೆ ಸವಾಲ್ ಹಾಕಿದರು. ಈ ವೇಳೆ ಮೂಕ ಪ್ರೇಕ್ಷಕರಾದವರು ಪೊಲೀಸ್ ಇಲಾಖೆಯವರು.

ದಾವಣಗೆರೆ ಜಿಲ್ಲಾ ಉಸ್ತುವಾರಿ, ಎಸ್ಪಿ, ಡಿಸಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಜಿಲ್ಲಾ ಮಂತ್ರಿ ಎಸ್. ಆರ್. ಶ್ರೀನಿವಾಸ್, ಡಿಸಿ ಬಗಾದಿ, ಎಸ್ಪಿ ಚೇತನ್ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ, ಇವರು ದುರಂಕಾರಿಗಳು ಎಂದು ದೂರಿದರು.
ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಿಗಳು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಇವರು ಸುಳ್ಳರು. ಹೊನ್ನಾಳಿ ಜನರಿಗೆ ಸಮರ್ಪಕ ಮರಳು ನೀಡುತ್ತಿಲ್ಲ. ತಾಕತ್ತಿದ್ದರೆ ಸಿಎಂ, ಜಿಲ್ಲಾ ಮಂತ್ರಿ ನನ್ನ ವಿರುದ್ಧ ಕೇಸ್ ಹಾಕಲಿ ಎಂದು ಸವಾಲು ಎಸೆದರು.

ಶಾಮನೂರು ಶಿವಶಂಕರಪ್ಪರ ಮಗ ಗಣೇಶ್ ಮರಳಿನ ಅಭಾವ ಸೃಷ್ಟಿಸುತ್ತಿದ್ದಾರೆ. ಅವರು ಎಂ ಸ್ಯಾಂಡ್ ತಯಾರಿಸುತ್ತಾರೆ. ಅವರಿಗೆ ಅಧಿಕಾರಿಗಳು ಬೆಂಬಲ ನೀಡುತ್ತಿದ್ದಾರೆ ಎಂದು ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಕಿಡಿಕಾರಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments