Select Your Language

Notifications

webdunia
webdunia
webdunia
webdunia

ರಾಷ್ಟ್ರಮಟ್ಟದಲ್ಲಿ ಹೆಸರಾದ ಸ್ಥಳ ಈಗ ಬೂದಿಗುಡ್ಡೆಯಾಗಿದೆ ಎಂದ ಶಾಸಕ

ರಾಷ್ಟ್ರಮಟ್ಟದಲ್ಲಿ ಹೆಸರಾದ ಸ್ಥಳ ಈಗ ಬೂದಿಗುಡ್ಡೆಯಾಗಿದೆ ಎಂದ ಶಾಸಕ
ಚಾಮರಾಜನಗರ , ಗುರುವಾರ, 28 ಫೆಬ್ರವರಿ 2019 (18:07 IST)
ರಾಷ್ಟ್ರಮಟ್ಟದಲ್ಲಿ ಹೆಸರು ಪಡೆದಿದ್ದ ಬಂಡೀಪುರ ಉದ್ಯಾನವನ ಈಗ ಬೂದಿ ಗುಡ್ಡೆಯಾಗಿ ಕಾಣುತ್ತಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ.

ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ನಾಶವಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಗುಂಡ್ಲುಪೇಟೆ ಶಾಸಕ ನಿರಂಜನ ಕುಮಾರ್ ಆಗ್ರಹ ಮಾಡಿದ್ದಾರೆ. ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ ಬಿದ್ದು  ಸಾವಿರಾರು ಹೆಕ್ಟೇರ್ ಅರಣ್ಯ ನಾಶ‌ವಾಗಿದೆ. ಯಾರೋ ಕಿಡಿಗೇಡಿಗಳು ಈ ದುಷ್ಕೃತ್ಯ ಮಾಡಿರಬಹುದೆಂದು ಅರಣ್ಯಾಧಿಕಾರಿಗಳು ಹೇಳುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಬಂಡೀಪುರ  ಉದ್ಯಾನವನ ಹೆಸರಾಗಿತ್ತು.

ಈಗ ಎಲ್ಲೆಡೆ ಬೂದಿ ಗುಡ್ಡೆಯೇ ಕಾಣುತ್ತಿದೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. 




Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಜತೆ ಯುದ್ಧ ನಡೆಯೋದು ಬೇಡವೇ ಬೇಡ ಎಂದ ಸಚಿವ