Select Your Language

Notifications

webdunia
webdunia
webdunia
webdunia

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಬರ್ಬರ ಕೊಲೆ

ಕಾಂಗ್ರೆಸ್
ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಅಳ್ಳಾಲಸಂದ್ರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನನ್ನು ಮಚ್ಚು ಲಾಂಗ್ ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಯಲಹಂಕ ಬಳಿ ಈ ಘಟನೆ ನಡೆದಿದೆ. ಅಳ್ಳಾಲಸಂದ್ರದ ಅರುಣ (26) ಕೊಲೆಯಾದ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದಾನೆ.

ನಾಲ್ಕೈದು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗಾರರ ಬಂಧನಕ್ಕೆ ಪೊಲೀಸರು ಎರಡು ತಂಡಗಳನ್ನು ರಚನೆ ಮಾಡಿದ್ದಾರೆ. ಈ ಕುರಿತು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪರಿಷತ್ ಮೆಗಾಫೈಟ್: ಅವಿರೋಧ ಆಯ್ಕೆ ಖಚಿತ!