Webdunia - Bharat's app for daily news and videos

Install App

ಮರ್ಡರ್​​​ ದೃಶ್ಯ CCTVಯಲ್ಲಿ ಸೆರೆ

Webdunia
ಮಂಗಳವಾರ, 6 ಡಿಸೆಂಬರ್ 2022 (17:44 IST)
ಬೆಂಗಳೂರಿನ KP ಅಗ್ರಹಾರ ಬಳಿ ನಡೆದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣ ಸದ್ದು ಮಾಡುತ್ತಿದೆ. ಈ ಕೊಲೆಯ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿವೆ. ಕಳೆದ ಶನಿವಾರ ಈ ಪ್ರಕರಣ ನಡೆದಿದ್ದು, ಬರೋಬ್ಬರಿ ಆರು ಮಂದಿ ಸೇರಿ ಅಪರಿಚಿತ ವ್ಯಕ್ತಿಯನ್ನು ಕೊಲೆಗೈದಿದ್ದರು. ಅದರಲ್ಲೂ ಈ ಹತ್ಯೆ ಪ್ರಕರಣದಲ್ಲಿ ಮೂವರು ಮಹಿಳೆಯರೂ ಭಾಗಿಯಾಗಿರುವುದು ಮತ್ತಷ್ಟು ಆಘಾತಕಾರಿ ಅಂಶವಾಗಿದೆ. ಇನ್ನು ಈ ಪ್ರಕರಣದ ಭಯಾನಕತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ ಕೊಲೆಗಾರರು ಇಪ್ಪತ್ತು ಬಾರಿ ಕಲ್ಲು ಎತ್ತಿ ಹಾಕಿ ಕುಕೃತ್ಯ ಎಸಗಿದ್ದಾರೆ. ಇದನ್ನು ಕಂಡು ಪೊಲೀಸರೇ ತಬ್ಬಿಬ್ಬಾಗಿದ್ದಾರೆ. ಸದ್ಯ ಮೃತ ವ್ಯಕ್ತಿ ಯಾರೆಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾದಾಮಿ ಮೂಲದ 26 ವರ್ಷದ ಬಾಳಪ್ಪ ಜಮಖಂಡಿ ಎಂಬುವರೇ ಕೊಲೆಗೀಡಾದ ವ್ಯಕ್ತಿ. ಮೊದಲಿಗೆ ಮಹಿಳೆಯೊಬ್ಬರು ಬಾಳಪ್ಪ ತಲೆ ಮೇಲೆ ಕಲ್ಲು ಎಸೆದು ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದ್ದು, ಸದ್ಯ ಕೊಲೆ ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments