ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟವಾದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಪದಾಧಿಕಾರಿಗಳ ಪಟ್ಟಿಗೆ ತಡೆ ಒಡ್ಡಲಾಗಿದೆ.
ಪದಾಧಿಕಾರಿಗಳ ಪಟ್ಟಿಯಲ್ಲಿ ಪ್ರಹ್ಲಾದ್ ಜೋಶಿ, ಸಂತೋಷ್ ಮತ್ತು ನಳೀಲ್ ಕುಮಾರ್ ಕಟೀಲ್ ಅವರನ್ನು ಕೈಬಿಡಲಾಗಿದೆ. ಆದರೆ, ಕೋರ್ ಕಮಿಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಬಲಿಗರಾದ ಶೋಭಾ ಕರಂದ್ಲಾಜೆ, ಬಸವರಾಜ್ ಬೊಮ್ಮಾಯಿ, ಸಿ.ಎಂ.ಉದಾಸಿ ಮತ್ತು ಅರವಿಂದ್ ಲಿಂಬಾವಳಿ ಸೇರಿದಂತೆ ಹಲವು ನಾಯಕರಿಗೆ ಸ್ಥಾನ ನೀಡಲಾಗಿದೆ.
22 ಮಂದಿ ಪದಾಧಿಕಾರಿಗಳ ಪಟ್ಟಿಯ ಗಾತ್ರ ದೊಡ್ಡದಾಗಿದೆ. ಸಣ್ಣ ಗಾತ್ರದ ಪಟ್ಟಿ ಸಲ್ಲಿಸಿ ಸಾಕು ಎಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ಲಾಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿ, ಪಟ್ಟಿಯನ್ನು ವಾಪಸ್ ಕಳುಹಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.