Webdunia - Bharat's app for daily news and videos

Install App

ತೋಂಟದಾರ್ಯ ಮಠದ ನೂತನ ಪೀಠಾಧ್ಯಕ್ಷರ ಪದಗ್ರಹಣ

Webdunia
ಸೋಮವಾರ, 29 ಅಕ್ಟೋಬರ್ 2018 (17:13 IST)
ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠದ 20ನೇ ಪೀಠಾಧ್ಯಕ್ಷರಾಗಿ ನಾಗನೂರಿನ ಡಾ. ಸಿದ್ಧರಾಮ ಸ್ವಾಮೀಜಿ ಪದಗ್ರಹಣ ಮಾಡಿದ್ರು. ವಾದ್ಯ ಮೇಳಗಳ ವೈಭವದೊಂದಿಗೆ ನೂತನ ಶ್ರೀಗಳು ಪೀಠ ಅಲಂಕರಿಸಿದ್ದು, ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ.

ಗದಗದ ತೋಂಟದಾರ್ಯ ಮಠದ 19ನೇ ಪೀಠಾಧಿಪತಿ ಸಿದ್ದಲಿಂಗ ಶ್ರೀ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಡಾ. ಸಿದ್ಧರಾಮ ಸ್ವಾಮೀಜಿಗಳನ್ನು 20ನೇ ಪೀಠಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ. ಸಿದ್ದರಾಮ ಸ್ವಾಮೀಜಿ ಅವರು ಇದೀಗ ತೋಂಟದಾರ್ಯ ಮಠದ ಪೀಠಾರೋಹಣ ಮಾಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಂಗೀಂದ್ರ ನೇತೃತ್ವದಲ್ಲಿ ಪೀಠಾರೋಹಣ ಸಮಾರಂಭ ನಡೆಯಿತು. ತೋಂಟದಾರ್ಯ ಮಠದ ಪರಂಪರೆಯಂತೆ ಪೀಠಾರೋಹಣ ವಿಧಿ ವಿಧಾನ ನಡೆಯಿತು. ನೂತನ ತೋಂಟದ ಶ್ರೀಗಳಾದ ಡಾ. ಸಿದ್ದರಾಮ ಸ್ವಾಮೀಜಿ ಚಿನ್ನದ ದಂಡ ಹಿಡಿದು, ಬಂಗಾರದ ಪಾದುಕೆಗಳನ್ನು  ತೊಟ್ಟು ಬೆಳ್ಳಿಯ ಪೀಠದ ಮೇಲೆ ಆಸೀನರಾಗಿದ್ರು.
ನೂತನ ಪೀಠಾಧ್ಯಕ್ಷರಿಗೆ ಡಾ. ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಎಂದು ಮರುನಾಮಕರಣ ಮಾಡಲಾಯಿತು. ಹುಬ್ಬಳ್ಳಿಯ ಮೂರುಸಾವಿರ ಮಠದ ಗುರುಸಿದ್ಧ ರಾಜಯೋಂಗೀಂದ್ರ ಶ್ರೀಗಳು ನಾಮಕರಣದ ವಿಧಿ ಬೋಧಿಸಿದ್ರು. ವಿವಿಧ ಮಠಾಧೀಶರಿಂದ ವಚನ ಪಠಣ ಮಾಡಲಾಯಿತು. ಈ ವೇಳೆ ಭಕ್ತರು ಜಯಘೋಷ ಹಾಕಿದ್ರು.

ಸಮಾರಂಭದಲ್ಲಿ ಶಾಸಕ ಹೆಚ್.ಕೆ. ಪಾಟೀಲ್​, ವಿಧಾನ ಪರಿಷತ್​ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮಾಜಿ ಶಾಸಕ ಡಿ.ಆರ್. ಪಾಟೀಲ್​, ನಿಜಗುಣಾನಂದ ಸ್ವಾಮೀಜಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ, ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರ ಉಪಸ್ಥಿತರಿದ್ದರು. ಜೊತೆಗೆ ಅಪಾರ ಭಕ್ತ ಸಮೂಹ‌ ಸಮಾರಂಭಕ್ಕೆ ಸಾಕ್ಷಿಯಾಯ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments