Webdunia - Bharat's app for daily news and videos

Install App

ಮದುವೆಯಾದ ಐದೇ ದಿನಕ್ಕೆ ಮನೆಯವರಿಗೆ ನಿದ್ರೆಮಾತ್ರೆ ಹಾಕಿ ಪರಾರಿಯಾದ ನವವಿವಾಹಿತೆ

Webdunia
ಮಂಗಳವಾರ, 19 ಡಿಸೆಂಬರ್ 2017 (12:33 IST)
ನವ ವಿವಾಹಿತೆಯೊಬ್ಬಳು ಮದುವೆಯಾದ ಐದು ದಿನಕ್ಕೆ ಮನೆಯವರಿಗೆಲ್ಲಾ ಊಟದಲ್ಲಿ ನಿದ್ರೆಮಾತ್ರೆ ಬೆರೆಸಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಸಕಲೇಶಪುರ ತಾಲೂಕಿನ ಕೊಂತನಮನೆ ಗ್ರಾಮದಲ್ಲಿ ಡಿಸೆಂಬರ್ 6 ರಂದು ಹಾನುಬಾಳು ಸಮೀಪದ ಕುಸುಮಾಳನ್ನ ಮೋಹನ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಕುಸುಮಾ ಮದುವೆಯಾದ ಒಂದು ವಾರಕ್ಕೆ ಮನೆಯವರಿಗೆಲ್ಲಾ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪರಾರಿಯಾಗಿದ್ದಾಳೆ.

ಈ ಯುವತಿ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾಳೆ. ಮದುವೆಯಾದ ನಂತರ ಈ ವಿಷಯ ಹೇಳಿದ್ದರಿಂದ ಮನೆಯವರಿಗೆ ಬರಸಿಡಲು ಬಡಿದಂತಾಗಿದೆ.

ಯುವತಿಯ ತಂದೆ ಹಾಗೂ ತಾಯಿ ಮೃತಪಟ್ಟಿದ್ದು, ಸೋದರಮಾವ ನೀಲರಾಜ್ ಈಕೆಯನ್ನು ಬೆಳಸಿ ಪಿಯುಸಿವರೆಗೂ ಓದಿಸಿ ಮದುವೆ ಮಾಡಿದ್ದರು.

ಎರಡು ದಿನಗಳ ಬಳಿಕ ಪೊಲೀಸರಲ್ಲಿಗೆ ಬಂದ ಯುವತಿ ಈ ಮದುವೆ ನನಗೆ ಇಷ್ಟವಿರಲಿಲ್ಲ. ಮನೆಯವರು ಒತ್ತಾಯಪೂರ್ವಕವಾಗಿ ಮದುವೆ ಮಾಡಿಸಿದ್ದಾರೆ ಎಂದು ಪತಿ ಹಾಗೂ ಸೋದರಮಾವನ ವಿರುದ್ಧ ದೂರು ನೀಡಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments