ಮದುವೆಯಾದ ಐದೇ ದಿನಕ್ಕೆ ಮನೆಯವರಿಗೆ ನಿದ್ರೆಮಾತ್ರೆ ಹಾಕಿ ಪರಾರಿಯಾದ ನವವಿವಾಹಿತೆ

Webdunia
ಮಂಗಳವಾರ, 19 ಡಿಸೆಂಬರ್ 2017 (12:33 IST)
ನವ ವಿವಾಹಿತೆಯೊಬ್ಬಳು ಮದುವೆಯಾದ ಐದು ದಿನಕ್ಕೆ ಮನೆಯವರಿಗೆಲ್ಲಾ ಊಟದಲ್ಲಿ ನಿದ್ರೆಮಾತ್ರೆ ಬೆರೆಸಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಸಕಲೇಶಪುರ ತಾಲೂಕಿನ ಕೊಂತನಮನೆ ಗ್ರಾಮದಲ್ಲಿ ಡಿಸೆಂಬರ್ 6 ರಂದು ಹಾನುಬಾಳು ಸಮೀಪದ ಕುಸುಮಾಳನ್ನ ಮೋಹನ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಕುಸುಮಾ ಮದುವೆಯಾದ ಒಂದು ವಾರಕ್ಕೆ ಮನೆಯವರಿಗೆಲ್ಲಾ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪರಾರಿಯಾಗಿದ್ದಾಳೆ.

ಈ ಯುವತಿ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾಳೆ. ಮದುವೆಯಾದ ನಂತರ ಈ ವಿಷಯ ಹೇಳಿದ್ದರಿಂದ ಮನೆಯವರಿಗೆ ಬರಸಿಡಲು ಬಡಿದಂತಾಗಿದೆ.

ಯುವತಿಯ ತಂದೆ ಹಾಗೂ ತಾಯಿ ಮೃತಪಟ್ಟಿದ್ದು, ಸೋದರಮಾವ ನೀಲರಾಜ್ ಈಕೆಯನ್ನು ಬೆಳಸಿ ಪಿಯುಸಿವರೆಗೂ ಓದಿಸಿ ಮದುವೆ ಮಾಡಿದ್ದರು.

ಎರಡು ದಿನಗಳ ಬಳಿಕ ಪೊಲೀಸರಲ್ಲಿಗೆ ಬಂದ ಯುವತಿ ಈ ಮದುವೆ ನನಗೆ ಇಷ್ಟವಿರಲಿಲ್ಲ. ಮನೆಯವರು ಒತ್ತಾಯಪೂರ್ವಕವಾಗಿ ಮದುವೆ ಮಾಡಿಸಿದ್ದಾರೆ ಎಂದು ಪತಿ ಹಾಗೂ ಸೋದರಮಾವನ ವಿರುದ್ಧ ದೂರು ನೀಡಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments