Webdunia - Bharat's app for daily news and videos

Install App

ನಗರದಲ್ಲಿ ಮುಂದಿನ 3 ದಿನ ಮುಂದುವರೆಯಲಿರುವ ವರ್ಷಧಾರೆ

Webdunia
ಮಂಗಳವಾರ, 10 ಮೇ 2022 (20:31 IST)
ಅಸಾನಿ ಚಂಡಮಾರುತ ಪರಿಣಾಮ ಕಳೆದ ಕೆಲ ದಿನಗಳಿಂದ ನಗರದ ಹಲವು ಬಡಾವಣೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
 
ಇಂದು ಕೂಡ ನಗರದಲ್ಲಿ ಮೋಡ ಕವಿದ ವಾತವರಣವಿದ್ದು, ಸೈಕ್ಲೋನ್ ಪರಿಣಾಮ ನಗರದಲ್ಲಿ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ಮಂಗಳವಾರ ಗುಡುಗು ಮಿಂಚು ಸಹಿತ ಭಾರಿ ಮಳೆಯ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
 
ಹೆಚ್ಚುವರಿ ಮಳೆ: 
 
ಮಾರ್ಚ್ 1ರಿಂದ ಮೇ 9ರವರೆಗೆ ನಗರದಲ್ಲಿ ವಾಡಿಕೆಯಂತೆ 72 ಮಿ.ಲಿ ಮೀಟರ್ ಬದಲಾಗಿ 125 ಮಿ.ಲಿ ಮೀಟರ್ ಮಳೆ ಸುರಿದಿದೆ ಎಂದು ತಿಳಿಸಿದೆ.
 
 
 ನಗರದಲ್ಲಿ ಮಳೆ:
 
ನಿನ್ನೆ ರಾತ್ರಿ 8.45ಕ್ಕೆ ಅರಂಭವಾದ ಮಳೆ ಅರ್ಧ ಗಂಟೆ ಕಾಲ ಜೋರಾಗಿ ಸುರಿಯಿತು. ತಡ ರಾತ್ರಿವರೆಗೂ ಜಿಟಿ ಜಿಟಿ ಮಳೆಯಾಗಿದೆ. ಗುಡುಗು ಮಿಂಚಿನ ಮಳೆಗೆ ಹಲವು ರಸ್ತೆಗಳು ಹೊಳೆಯಾಗಿ ಮಾರ್ಪಟ್ಟಿದ್ದವು. ರಸ್ತೆಗಳ ಮೇಲೆ 2-3 ಅಡಿ ನೀರು ನಿಂತಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಪ್ರಮುಖ ರಸ್ತೆಗಳಲ್ಲಿರುವ ಮರದ ಕೊಂಬೆಗಳು ಮುರಿದುಬಿದ್ದವು. ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದರಿಂದ ನಗರದ ಹಲವು ಬಡಾವಣೆಗಳಲ್ಲಿನ ನಿವಾಸಿಗಳು ಪರದಾಡಿದರು. ಮ್ಯಾನ್‌ಹೋಲ್‌ಗಳು ಉಕ್ಕಿಹರಿದ ಪರಿಣಾಮ ರಸ್ತೆಗಳ ಮೇಲೆ ಕೊಳಚೆ ನೀರು ಹರಿಯುತ್ತಿರುವುದು ಅಲ್ಲಲ್ಲಿ ಕಂಡುಬಂದಿದೆ.
 
ನಗರದ ಹಲವು ಬಡಾವಣೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ: 
 
ಚಾಮರಾಜಪೇಟೆ, ಜಯನಗರ, ಜೆ.ಪಿ.ನಗರ, ಮೈಸೂರು ರಸ್ತೆ, ವಿಶ್ವೇಶ್ವರ ಪುರ, ಮೆಜೆಸ್ಟಿಕ್, ಕೆ.ಆರ್‌.ಮಾರುಕಟ್ಟೆ, ವಿಜಯನಗರ, ನಾಗರಭಾವಿ, ಹೆಬ್ಬಾಳ, ಬಸವೇಶ್ವರನಗರ, ರಾಜಾಜಿನಗರ, ಕೆಂಗೇರಿ, ಕೋರಮಂಗಲ ಸೇರಿ ನಗರದ ಹಲವು ಬಡಾವಣೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸುರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments