Select Your Language

Notifications

webdunia
webdunia
webdunia
webdunia

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

Minister HD Kumaraswamy
ಬೆಂಗಳೂರು: ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ಒಂದಾಗಿ ಕಾಣುತ್ತಿದೆ ಎಂದು ರಾಜ್ಯ  ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.   

ಹೀಗಾಗಿ ಕೂಡಲೇ ನೈಸ್ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಸಚಿವರು; ಹೈಕೋರ್ಟ್ ತೀರ್ಪಿನಂತೆ ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು. ವಾಹನ ಸವಾರರು ಟೋಲ್ ಕಟ್ಟಬಾರದು ಎಂದು ಕರೆ ನೀಡಿದರು.

ನೈಸ್ ಕಂಪನಿಯ ಅಕ್ರಮಗಳ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯದಿಂದ ಇನ್ನಾದರೂ ರಾಜ್ಯ ಸರಕಾರ ಕಣ್ತೆರೆಯಬೇಕು. ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ವಾಹನ ಸವಾರರಿಂದ ಅಕ್ರಮವಾಗಿ ಟೋಲ್ ಸುಲಿಗೆ ಮಾಡಲಾಗುತ್ತಿದೆ ಎಂದು ಹೇಳಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ