Webdunia - Bharat's app for daily news and videos

Install App

ದುಬೈನಿಂದ ಬಂದ ಗಂಡನಿಂದ ಗರ್ಭಿಣಿ ಪತ್ನಿಗೂ ಬಂತು ಕೊರೊನಾ ವೈರಸ್

Webdunia
ಬುಧವಾರ, 15 ಏಪ್ರಿಲ್ 2020 (17:08 IST)
ಹೊಸದಾಗಿ ಒಂದು ಕೊರೊನಾ ವೈರಸ್ ಕೇಸ್ ಪತ್ತೆಯಾಗುವುದರೊಂದಿಗೆ ಈ ಜಿಲ್ಲೆಯಲ್ಲಿ ವೈರಸ್ ಪೀಡಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇನ್ನೊಂದು ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ದೃಢಪಟ್ಟ ಸೋಂಕಿತರ ಸಂಖ್ಯೆ ಒಟ್ಟು ಹತ್ತಕ್ಕೇರಿದಂತಾಗಿದೆ.

ಈತ ಮಾ.17 ರಂದು ದುಬೈನಿಂದ ಮುಂಬೈಗೆ ವಿಮಾನದ ಮೂಲಕ ಆಗಮಿಸಿ ನಂತರ ರೈಲಿನಲ್ಲಿ ಭಟ್ಕಳಕ್ಕೆ ಆಗಮಿಸಿದ್ದ. ವಿದೇಶದಿಂದ ಆಗಮಿಸಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಈತನ ಕೈಮೇಲೆ ಹೋಮ್ ಕ್ವಾರಂಟೈನ್ ಮುದ್ರೆ ಹಾಕಿದ್ದರು. ಮಾ.31 ರಂದು ಈತನ ಗರ್ಭಿಣಿ ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ.

ಈತನ ಕೈಮೇಲಿನ ಹೋಮ್ ಕ್ವಾರಂಟೈನ್ ಮುದ್ರೆಯನ್ನು ಗಮನಿಸಿದ ವೈದ್ಯರು ಇವರಿಬ್ಬರನ್ನು ಭಟ್ಕಳದ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದರು. ಆ ನಂತರ ಅಲ್ಲಿ ಅವರಿಬ್ಬರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಈತನ ಪತ್ನಿಗೆ ಸೋಂಕು ತಗಲಿರುವುದು ದೃಢಪಟ್ಟಿತ್ತು. ಆದರೆ ಈತನ ವರದಿಯು ನೆಗೆಟಿವ್ ಬಂದಿತ್ತು.

ಆಗ ಮತ್ತೊಮ್ಮೆ ಈತನ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಈತನಿಗೆ ಸೋಂಕು ಇರೋದು ದೃಢಪಟ್ಟಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಮುಂದಿನ ಸುದ್ದಿ
Show comments