Webdunia - Bharat's app for daily news and videos

Install App

ಭಾರಿ ಮಳೆಗೆ ಭಕ್ತರ ಸಂಖ್ಯೆ ಇಳಿಮುಖ

Webdunia
ಗುರುವಾರ, 23 ಆಗಸ್ಟ್ 2018 (15:03 IST)
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಭೂ ಕುಸಿತದಿಂದ ಪ್ರಮುಖ ಯಾತ್ರಾ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಆಗಿವೆ. ಇದರ ಬಿಸಿ ದೇವಸ್ಥಾನಗಳಿಗೂ ಮುಟ್ಟಿದ್ದು, ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಮುಖಗೊಂಡಿದೆ.

 ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಬಹಳಷ್ಟು ಕಡಿಮೆ ಆಗಿದೆ. ಈ ಬಾರಿ ಸುರಿದ ಭಾರಿ ಮಳೆಗೆ ಭೂ ಕುಸಿತದಿಂದ ಶಿರಾಡಿ ಘಾಟಿ ರಸ್ತೆ - ಸಂಪಾಜೆ ಘಾಟಿ ರಸ್ತೆ ಸಂಚಾರ ಬಂದ್ ಆಗಿದೆ. ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಆಗಾಗ ಟ್ರಾಫಿಕ್ ಜಾಮ್ ಇದೆ. ಎಡ  ಕುಮೇರಿಯಲ್ಲಿ ಭೂ ಕುಸಿತದಿಂದ ಮಂಗಳೂರು- ಬೆಂಗಳೂರು ರೈಲು ಸಂಚಾರ ಬಂದ್ ಆಗಿದೆ. ಇದರ ಬಿಸಿ ದೇವಸ್ಥಾನಗಳಿಗೂ ಮುಟ್ಟಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಆಗಿರುವ ಕುಕ್ಕೆ ಸುಬ್ರಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಮುಖ ಆಗಿದೆ.

ನಾಗಾರಾಧನೆಯ ಪ್ರಸಿದ್ಧ ಕ್ಷೇತ್ರ ಆಗಿರುವ ಕಾರಣ ದೇಶದ ನಾನಾ ಭಾಗಗಳ ಭಕ್ತಾದಿಗಳು  ಸುಬ್ರಮಣ್ಯಕ್ಕೆ ಆಗಮಿಸುತ್ತಾರೆ. ಅದರಲ್ಲೂ ರಜಾ ದಿನಗಳಲ್ಲಿ ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಸದಾ ಭಕ್ತರಿಂದ ತುಂಬಿ ತುಳುಕುತಿದ್ದ  ಸುಬ್ರಮಣ್ಯ ಕ್ಷೇತ್ರ ಖಾಲಿ ಖಾಲಿಯಾಗಿದೆ. ರಸ್ತೆ  ಸಂಪರ್ಕ ಸರಿ ಆಗುವವರೆಗೆ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಭಕ್ತರ ಸಂಖ್ಯೆ ಕಡಿಮೆ ಆಗಿರುವ ಕಾರಣ ಸೇವಾ ಬುಕ್ಕಿಂಗ್  ಕಡಿಮೆ ಆಗಿದ್ದು, ದೇವಸ್ಥಾನದ ಆದಾಯವೂ ಕಡಿಮೆ ಆಗಲಿದೆ. ಇನ್ನೊಂದು ಕಡೆ ಯಾತ್ರಿಕರ  ಸಂಖ್ಯೆ ಕಡಿಮೆ ಆಗಿರುವುದರಿಂದ ಸುಬ್ರಮಣ್ಯದಲ್ಲಿರುವ ಹೋಟೆಲ್ ಉದ್ಯಮ, ಹಣ್ಣು ಕಾಯಿ ಅಂಗಡಿಗಳಿಗೂ  ವ್ಯಾಪಾರ ಕಡಿಮೆ ಆಗಿದೆ.

ಶಿರಾಡಿ ಘಾಟಿ ಸಂಪಾಜೆ ಘಾಟಿ ಸರಿಯಾದ ಬಳಿಕವಷ್ಟೇ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರುಣನ ಆರ್ಭಟಕ್ಕೆ ತತ್ತರಿಸಿದ ನವದೆಹಲಿ ಜನತೆ

ಕಾರಿನೊಳಗೆ ಮೋದಿ ಜತೆಗಿನ ಸಂಭಾಷಣೆ ಬಗ್ಗೆ ಮೌನ ಮುರಿದ ರಷ್ಯಾ ಅಧ್ಯಕ್ಷ ಪುಟಿನ್

ಪ್ರಾಯೋಜಿತ: ಬೆಂಗಳೂರಿನ 5 ಅಪಾರ್ಟ್ಮೆಂಟ್ಗಳಿಂದ ನಿತ್ಯ 3 ಲಕ್ಷ ಲೀಟರ್ ನೀರು ಮರುಬಳಕೆ

ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಕ್ರಾಂತಿಕಾರಿ, ಐತಿಹಾಸಿಕ ಸುಧಾರಣೆಯ ನಿರ್ಧಾರ: ಡಾ.ಅಶ್ವತ್ಥನಾರಾಯಣ್

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ಮುಂದಿನ ಸುದ್ದಿ
Show comments