Select Your Language

Notifications

webdunia
webdunia
webdunia
webdunia

ದೇಶದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ..!

ದೇಶದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ..!
bangalore , ಭಾನುವಾರ, 5 ಮಾರ್ಚ್ 2023 (13:58 IST)
ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ದೀರ್ಘಕಾಲೀನ ಚಿಂತನೆ ಮತ್ತು ದೂರದೃಷ್ಟಿಯನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ದೂರದ ಹಳ್ಳಿಗಳನ್ನು ಪ್ರವಾಸೋದ್ಯಮ ನಕ್ಷೆಯಲ್ಲಿ ಸೇರಿಸಲು ಸುಧಾರಿತ ಮೂಲಸೌಕರ್ಯಗಳ ಮಹತ್ವವನ್ನು ಒತ್ತಿಹೇಳಿದರು. ಆದರೆ ಕಾಶಿ ವಿಶ್ವನಾಥ ಧಾಮ, ಕೇದಾರನಾಥ ಮತ್ತು ಗುಜರಾತ್​ನ ಪಾವಗಢ ನಿರ್ಮಾಣದ ನಂತರ ವಾರಾಣಸಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದರು.. ಕಳೆದ ವರ್ಷ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ 70-80 ಲಕ್ಷ ಭಕ್ತರು ಭೇಟಿ ನೀಡಿದ್ದರು.. ದೇವಾಲಯದ ಸಂಕೀರ್ಣದ ನವೀಕರಣದ ನಂತರ ಪ್ರವಾಸಿಗರ ಸಂಖ್ಯೆ 7 ಕೋಟಿ ದಾಟಿದೆ ಎಂದು ಮೋದಿ ಹೇಳಿದರು. ಧಾರ್ಮಿಕ ತಾಣಗಳ ಪುನರುಜ್ಜೀವನವು ಪ್ರವಾಸೋದ್ಯಮವನ್ನು ಉತ್ತೇಜಿಸಿದೆ.. ಭಾರತದಲ್ಲಿ ಪ್ರವಾಸೋದ್ಯಮ ದೀರ್ಘ ಸಾಮಾಜಿಕ-ಸಾಂಸ್ಕೃತಿಕ ಸಂದರ್ಭವನ್ನು ಹೊಂದಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಹಿಂದೂ ದೇಗುಲದ ಮೇಲೆ ದಾಳಿ