Webdunia - Bharat's app for daily news and videos

Install App

ಅಡಿಕೆ ಕಳ್ಳರಿಗೆ ಬಿತ್ತು ಧರ್ಮದೇಟು

Webdunia
ಸೋಮವಾರ, 15 ಅಕ್ಟೋಬರ್ 2018 (12:36 IST)
ಅಡಿಕೆ ಕದಿಯಲು ಬಂದವರನ್ನು ಹಿಡಿದ ಸಾರ್ವಜನಿಕರು ಕಂಬಕ್ಕೆ ಕಟ್ಟಿ  ಹೊಡೆದಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ  ಈ ಘಟನೆ ನಡೆದಿದೆ. ಮೂವರು ಯುವಕರನ್ನು ಅಡಿಕೆ ಕಳ್ಳತನ ಮಾಡುತ್ತಿದ್ದರೆಂಬ ಆರೋಪದ ಮೇಲೆ ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಚಿಕ್ಕನಾಯಕನಹಳ್ಳಿಯ ಕುಮಾರ್ ಎಂಬುವವರ ಮನೆಯಲ್ಲಿ ಅಡಿಕೆ ಕದಿಯಲು  ಮೂವರು ಯುವಕರು ಬಂದಿದ್ದರು.

ಈ ಮೂವರ ಪೈಕಿ ಓಬ್ಬನನ್ನು ಸಾರ್ವಜನಿಕರು ಹಿಡಿದರು. ಪರಾರಿಯಾಗಿದ್ದ ಇನ್ನಿಬ್ಬರನ್ನು ಸಿಕ್ಕಿಬಿದ್ದಿದ್ದ ಕಳ್ಳನ ಮೂಲಕ ಮಾಹಿತಿ ಪಡೆದು ಸೆರೆಹಿಡಿದರು. ಅವರನ್ನೂ ಹಿಡಿದು ತಂದು ಕಂಬಕ್ಕೆ ಕಟ್ಟಿಹಾಕಿ ಥಳಿಸಿದರು. ಚಿಕ್ಕನಾಯಕನಹಳ್ಳಿಯಲ್ಲಿ ಗುಜರಿ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು, ಅನೇಕ ದಿನಗಳಿಂದ ಚಿಕ್ಕನಾಯಕನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ಕಳವು ಮಾಡುತ್ತಿದ್ದರು.

ರಾತ್ರಿ ಕಳ್ಳತನ ಮಾಡಲು ಬಂದಿದ್ದ ವೇಳೆ ಸಾರ್ವಜನಿಕರು ಸೆರೆಹಿಡಿಯಲು ಹೋದಾಗ ಚಾಕು ತೋರಿಸಿ ಬೆದರಿಸಿ ಪರಾರಿಯಾಗಿದ್ದರು. ಕಳೆದೆರಡು 2 ತಿಂಗಳಿನಿಂದ ಅಡಿಕೆ ಮತ್ತು ದ್ವಿಚಕ್ರವಾಹನಗಳನ್ನು ಕಳವು ಮಾಡುವ ಪ್ರಕರಣಗಳು ನಡೆದಿತ್ತು. ಯುವಕರರು ಈ ರೀತಿ ಚಾಕು ಚೂರಿ ತೋರಿಸಿ ಕಳ್ಳತನ ಮಾಡುತ್ತಿದ್ದುದು ಜನರಲ್ಲಿ ಭೀತಿ ಮೂಡಿಸಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments