ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದು, ಆತನನ್ನು ಮಹಾರಾಷ್ಟ್ರದ ಲಾತೂರ್ನಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ಸೋಲಾಪುರ ಮೂಲದ ದಾನೇಶ್ ನರೋಣಿ ಎಂದು ಗುರುತಿಸಲಾಗಿದೆ. ಫೋನ್ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್ಗೆ ಪರಾರಿಯಾಗಿದ್ದ. ಹೀಗಾಗಿ, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇಂದು ರಾತ್ರಿವೇಳೆಗೆ ಬೆಂಗಳೂರು ಸದಾಶಿವನಗರ ಪೊಲೀಸ್ ಠಾಣೆಗೆ ಆರೋಪಿಯನ್ನ ಕರೆತರುವ ಸಾಧ್ಯತೆ ಇದೆ. ಆರೋಪಿಯನ್ನು ಸದಾಶಿವನಗರ ಠಾಣೆ ಪೊಲೀಸರಿಗೆ ಕಲಬುರಗಿ ಪೊಲೀಸರು ಒಪ್ಪಿಸಲಿದ್ದಾರೆ. ಸೋಲಾಪುರದಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲಿದ್ದಾರೆ.
ಬಂಧಿತ ಗೂಗಲ್ನಲ್ಲಿ ಸಚಿವರ ಫೋನ್ ನಂಬರ್ ಅನ್ನು ಪಡೆದು ಫೋನ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಂಬಂಧ ಸಚಿವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.