Webdunia - Bharat's app for daily news and videos

Install App

ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆಯಿಂದ ಹಿನ್ನಡೆ ಆಗಿಲ್ಲ: ಬಿಜೆಪಿ ನಾಯಕರ ಸಮರ್ಥನೆ

Webdunia
ಮಂಗಳವಾರ, 25 ಏಪ್ರಿಲ್ 2023 (20:30 IST)
ಮುಸಲ್ಮಾನ ಸಮುದಾಯಕ್ಕೆ ಇದ್ದ ಶೇ 4 ರಷ್ಟು ಮೀಸಲಾತಿಯನ್ನು ಹಿಂಪಡೆದು ವೀರಶೈವ ಲಿಂಗಾಯತರಿಗೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಹಂಚಿಕೆ ಮಾಡಿದ ರಾಜ್ಯ ಸರ್ಕಾರದ ನಿರ್ಣಯಕ್ಕೆ ಸುಪ್ರೀಂಕೋರ್ಟ್ ನೀಡಿದ ತಾತ್ಕಾಲಿಕ ತಡೆಯಿಂದ ಸರ್ಕಾರಕ್ಕೆ ಯಾವುದೇ ಹಿನ್ನಡೆಯಾಗಿಲ್ಲ, ಅಂತಿಮವಾಗಿ ಸರ್ಕಾರಕ್ಕೆ ಗೆಲುವಾಗಲಿದೆ. ಸಂವಿಧಾನ ಬದ್ಧವಾಗಿ ಸರ್ಕಾರ ಮೀಸಲಾತಿ ಪರಿಷ್ಕರಣೆ ಮಾಡಿದೆ ಎಂದು ಸಚಿವ ಅಶ್ವತ್ಥನಾರಾಯಣ್  ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲಿಂ ಮೀಸಲಾತಿ ತೆಗೆದ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆ ತಾತ್ಕಾಲಿಕ ಮಾತ್ರ.ಅದನ್ನು ಸಂಪೂರ್ಣ ಹೊಡೆದು ಹಾಕಿಲ್ಲ. ಮುಸ್ಲಿಂ ಪ್ರವರ್ಗ ಎ, ಬಿ, ಸಿ ಯಲ್ಲೂ ಇದ್ದಾರೆ ಎಂದರು. ನ್ಯಾಯಾಲಯದಲ್ಲೇ ಇದನ್ನು ಪರಿಣಾಮಕಾರಿ ವಾದ ಮಂಡನೆ ಮಾಡಲಾಗುತ್ತದೆ. ಆ ಮೂಲಕ ಸತ್ಯ ಎತ್ತಿ ಹಿಡಿಯುವ ಕೆಲಸ ಮಾಡಲಾಗುತ್ತದೆ. ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ. ಈಗ ಕೋರ್ಟ್‌ ತಾತ್ಕಾಲಿಕ ತಡೆ ಕೊಟ್ಟಿರಬಹುದು, ಆದರೆ ಅಂತಿಮವಾಗಿ ನ್ಯಾಯಾಲಯದಲ್ಲಿ ನಮ್ಮದೇ ಜಯ ಆಗಲಿದೆ. ಕೋರ್ಟ್ ತಡೆಯಿಂದ ಸರ್ಕಾರಕ್ಕೆ ಹಿನ್ನಡೆ ಆಗಿಲ್ಲ....ಮೀಸಲಾತಿ ವಿಚಾರದಲ್ಲಿ ಸರ್ಕಾರ ಬಹಳ ಸ್ಪಷ್ಟ ನಿಲುವು ತೆಗೆದುಕೊಳ್ಳಲಿದೆ. ಗೆಲುವು ನಮ್ಮ ಕಡೆ ಆಗುವಂತೆ ವಾದ ಮಾಡಲಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments