Select Your Language

Notifications

webdunia
webdunia
webdunia
webdunia

ಕಾಗ್ರೆಸ್ ಹಿರಿಯ ನಾಯಕರ ವಿರುದ್ಧ ಭುಗಿಲೆದ್ದ ಆಕ್ರೋಶ

ಕಾಗ್ರೆಸ್ ಹಿರಿಯ ನಾಯಕರ ವಿರುದ್ಧ ಭುಗಿಲೆದ್ದ ಆಕ್ರೋಶ
ಬೆಂಗಳೂರು , ಬುಧವಾರ, 8 ಫೆಬ್ರವರಿ 2017 (11:41 IST)
ಹಿರಿಯ ನಾಯಕರ ವಿರುದ್ಧ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪಕ್ಷದ ಹಿರಿಯ ಮುಖಂಡರಾಗಿರುವ ಜನಾರ್ದನ ಪೂಜಾರಿ, ಜಾಫರ್ ಷರೀಫ್ ಹಾಗೂ ಎಚ್.ವಿಶ್ವನಾಥ್ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ. 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ರಾಜ್ಯ ಸರಕಾರ, ಕಾಂಗ್ರೆಸ್ ಹೈಕಮಾಂಡ್ ಹಾಗೂ ಕೆಪಿಸಿಸಿ ವಿರುದ್ಧ ಹೇಳಿಕೆ ನೀಡುತ್ತಿರುವ ಈ ಮೂವರು ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್‌ಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
 
ಪಕ್ಷದ ಈ ಮೂವರು ನಾಯಕರು ರಾಜ್ಯ ಸರಕಾರದ ಕಾರ್ಯವೈಖರಿ ಕುರಿತು ಸದಾ ಟೀಕಿಸುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಮುಜುಗರವಾಗುತ್ತಿದ್ದು, ಇವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗುತ್ತಿದೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗೂಗಲ್ ಪಿಕ್ಸೆಲ್ ಮೇಲೆ ಭಾರಿ ರಿಯಾಯಿತಿ!