Webdunia - Bharat's app for daily news and videos

Install App

ಚಿನ್ನದಂಗಡಿ ಮಾಲೀಕನಿಗೆ ಟೊಮೆಟೊ ಮಾರಾಟದಿಂದ ಭರ್ಜರಿ ಲಾಭ

Webdunia
ಮಂಗಳವಾರ, 1 ಆಗಸ್ಟ್ 2023 (10:51 IST)
ಚಿಕ್ಕಬಳ್ಳಾಫುರ : ಕರ್ನಾಟಕ ಹಾಗೂ ವಿವಿಧ ರಾಜ್ಯಗಳ ಟೊಮೆಟೊ ಬೆಳೆಗಾರರು ಈ ವರ್ಷ ಭಾರಿ ಲಾಭ ಗಳಿಸಿದ ಬಗ್ಗೆ ಹಲವಾರು ಮಾಧ್ಯಮ ವರದಿಗಳನ್ನು ನೀವು ನೋಡಿರಬಹುದು.
 
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೂ ಈ ಬಾರಿ ಕೈಹಿಡಿದಿದ್ದು ಟೊಮೆಟೊ ಬೆಳೆ ಎಂದರೆ ನೀವು ನಂಬಲೇಬೇಕು! ಹೌದು, ಚಿಂತಾಮಣಿಯ ನಕ್ಷತ್ರಾ ಚಿನ್ನದ ಅಂಗಡಿ ಮಾಲೀಕ ಚಂದ್ರಶೇಖರ್ ಈ ಬಾರಿ ಟೊಮೆಟೊ ಕೂಡ ಬೆಳೆದಿದ್ದರು. ಪರಿಣಾಮವಾಗಿ ಚಿನ್ನದ ವ್ಯವಹಾರ ಕೈಕೊಟ್ಟರೂ ಟೊಮೆಟೊ ಬೆಳೆ ಮಾರಾಟ ಮಾಡುವ ಮೂಲಕ ಅವರು ಲಾಭ ಗಳಿಸಿದ್ದಾರೆ.

ಚಂದ್ರಶೇಖರ್ ಅವರು ಟೊಮೆಟೊ ಮಾರಾಟ ಮಾಡಿ ಈಗಾಗಲೇ 45 ಲಕ್ಷ ರೂಪಾಯಿ ಲಾಭ ಗಳಿಸಿದ್ದಾರೆ. ಇನ್ನೂ 15-20 ಲಕ್ಷ ರೂಪಾಯಿ ಲಾಭದ ನರೀಕ್ಷೆಯಲ್ಲಿದ್ದಾರೆ. 15 ಕಿಲೋ ಟೊಮೆಟೊ ಬಾಕ್ಸ್ ಅನ್ನು ಅವರು 2100 ರೂಪಾಯಿಯಂತೆ ಮಾರಾಟ ಮಾಡಿದ್ದಾರೆ. ಚಂದ್ರಶೇಖರ್ ಅವರು ಸುಮಾರು ಒಂದೂವರೆ ಎಕರೆ ಜಾಗದಲ್ಲಿ ಟೊಮೆಟೊ ಬೆಳೆದಿದ್ದರು.

ಈ ಮಧ್ಯೆ, ಚಿಂತಾಮಣಿಯಲ್ಲಿ 15 ಕೆಜೆಯ ಕ್ರೇಟ್ನ ಟೊಮೆಟೊ 2300 ರೂಪಾಯಿಗೆ ಹರಾಜಾಗಿದೆ. ಚಿಂತಾಮಣಿ ನಗರದ ಎಪಿಎಂಸಿಯ ಟೊಮೆಟೊ ಮಾರುಕಟ್ಟೆಯಲ್ಲಿ ಭರ್ಜರಿ ಮೊತ್ತಕ್ಕೆ ಟೊಮೆಟೊ ಮಾರಾಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments