Webdunia - Bharat's app for daily news and videos

Install App

ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ-ಸಿಎಂ

Webdunia
ಗುರುವಾರ, 3 ನವೆಂಬರ್ 2022 (15:28 IST)
ಉತ್ತರ ಕರ್ನಾಟಕ ಭಾಗದಲ್ಲಿ ಜನಸಂಕಲ್ಪ ಯಾತ್ರೆಯಿಂದ ಅಭೂತಪೂರ್ವ ಬೆಂಬಲ ಕಂಡಿದ್ದೇವೆ. ಅದು BJP ಪರವಾಗಿ, ದೊಡ್ಡ ಅಲೆಯಾಗಿ ಕಾಣ್ತಿದೆ. ಕಾಂಗ್ರೆಸ್​ನಲ್ಲಿರುವ ನಾಯಕರ ಸೇವೆಗೆ ಬೆಲೆಯೇ ಸಿಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ. ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕರ್ನಾಟಕವನ್ನು ಕಂಕಣಬದ್ದವಾಗಿ ಅಭಿವೃದ್ಧಿ ಮಾಡ್ತೇವೆ ಎಂದ್ರು. ಇನ್ನು ಮುದ್ದಹನುಮೇಗೌಡ, ಶಶಿಕುಮಾರ್ BJP ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಿಎಂ, ಮುದ್ದಹನುಮೇಗೌಡ್ರು ರಾಜಕೀಯದಲ್ಲಿ ತಮ್ಮದೇ ಆದ ಗುರುತು ಇಟ್ಟುಕೊಂಡಿದ್ಸಾರೆ. ಅವರ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಶಶಿಕುಮಾರ್ ಅವ್ರು ನಮ್ಮ ಬಳಿಯೇ ಇದ್ರು. ಇವಾಗ ಮತ್ತೆ ಮರಳಿ ನಮ್ಮೊಂದಿಗೆ ಬಂದಿದ್ದಾರೆ. ಅವರಿಗೆ ಮನವರಿಕೆ ಆಗಿ ನಮ್ಮ ಮನೆಯೇ ಬೇಕು ಎಂದು ಬಂದಿದ್ದಾರೆ. ಅವ್ರು ST ಸಮುದಾಯದವರು, ಅವ್ರು ಬಂದಿರೋದು ನಮಗೆ ಮತ್ತಷ್ಟು ಶಕ್ತಿ ಬಂದಿದೆ ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments