Webdunia - Bharat's app for daily news and videos

Install App

ರಾಜಧಾನಿಯ ಜನರೇ ಇನ್ನೂ 10 ದಿನ ಹುಷಾರ್: ​​​​​​ಡಿಸೆಂಬರ್​​ ಮೊದಲ ವಾರದವರೆಗೂ ಮಳೆ ಗ್ಯಾರೆಂಟಿ

Webdunia
ಸೋಮವಾರ, 22 ನವೆಂಬರ್ 2021 (20:55 IST)
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ರಾಜಧಾನಿಯ ಜನರೂ ಕೂಡ  ಇನ್ನೂ 10 ದಿನಗಳ ಕಾಲ ಎಚ್ಚರವಾಗಿರಬೇಕಾಗಿದೆ. ಏಕೆಂದರೆ ಇನ್ನೂ ಹತ್ತು ದಿನಗಳ ಕಾಲ ಮಳೆಯ ಗಂಡಾಂತರ ದಕ್ಷಿಣ ಒಳನಾಡಿಗೆ ಕಾದಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ 
 
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಈಗಾಗಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಮತ್ತೆ ನವೆಂಬರ್ 26 ರಿಂದ ಮೂರು ದಿನ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು ಕರ್ನಾಟಕದಲ್ಲಿ ಭಾರೀ ಮಳೆಯಾಗುವ  ಮುನ್ಸೂಚನೆ ನೀಡಲಾಗಿದೆ ಎಂದಿದ್ದಾರೆ. 
 
ಈ ಹಿನ್ನೆಲೆಯಲ್ಲಿ ಸರಿ ಸುಮಾರು  ಡಿಸೆಂಬರ್​​ ಮೊದಲ ವಾರದವರೆಗೂ ಮಳೆ ಕಾಟ ಮುಂದುವರೆಯುವುದು ಗ್ಯಾರೆಂಟಿಯಾಗಿದೆ. ವಾಯುಭಾರ ಕುಸಿತದಿಂದ ಕರ್ನಾಟಕ್ಕಂತೂ ಭಾರಿ ಗಂಡಾಂತರ  ತರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments