Webdunia - Bharat's app for daily news and videos

Install App

ತಬ್ಲಿಘಿ ಸಂಪರ್ಕ ಹೊಂದಿದ್ದ ವ್ಯಕ್ತಿ ಸಾವು

Webdunia
ಭಾನುವಾರ, 17 ಮೇ 2020 (18:50 IST)
ತಬ್ಲಿಘಿಗಳನ್ನು ಭೇಟಿ ಮಾಡಿದ್ದ ವ್ಯಕ್ತಿಯೊಬ್ಬನಿಗೆ ಕ್ವಾರಂಟೈನ್ ಮಾಡಲಾಗಿತ್ತಾದರೂ ಆತ ಸಾವನ್ನಪ್ಪಿದ್ದಾನೆ.

ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ಪ್ರಿಯಾ ವಿನೂತ್ ಸ್ಪಷ್ಟಪಡಿಸಿದ್ದಾರೆ.

ಅಹಮದಾಬಾದ್ ನಿಂದ ಬಂದಿದ್ದ ವ್ಯಕ್ತಿಯು ತಬ್ಲಿಘಿಗಳನ್ನು ಭೇಟಿ ಮಾಡಿದ್ದ ಹಿನ್ನೆಲೆ ಹೊಂದಿದ್ದನು. ಈ ಕಾರಣಕ್ಕಾಗಿ ಮೇ 5ರಂದು ಕ್ವಾರಂಟೈನ್ ಮಾಡಲಾಗಿತ್ತು.

ಮೊದಲ  ಸೋಂಕು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. 14 ದಿನಗಳ ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿದ್ದ ಅತಿಕ್ ಉರ್ ರೆಹಮಾನ್(78) ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಅತಿಕ್ ಉರ್ ರೆಹಮಾನ್.

ಮೃತನ ಅಂತ್ಯ ಸಂಸ್ಕಾರವನ್ನು ಜಿಲ್ಲಾಡಳಿತದ ವತಿಯಿಂದ ನಡೆಸಲಾಗುವುದು ಎಂದು ಪ್ರಿಯಾ ವಿನೂತ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments