Webdunia - Bharat's app for daily news and videos

Install App

ಬೆಂಗಳೂರನ್ನ ಡ್ರಗ್ಸ್ ಮುಕ್ತ ಮಾಡಲು ಪೊಲೀಸ್ರು ಇನ್ನಿಲ್ಲದ ಕಸರತ್ತು

Webdunia
ಮಂಗಳವಾರ, 11 ಏಪ್ರಿಲ್ 2023 (18:53 IST)
ರಾಜಧಾನಿ ಬೆಂಗಳೂರಲ್ಲಿ ಡ್ರಗ್ಸ್ ನಿರ್ನಾಮ ಮಾಡೋಕೆ ಪೊಲೀಸರು ಇನ್ನಿಲ್ಲದ ಕಸರತ್ತು ಮಾಡ್ತಾರೆ.ಆದ್ರೆ ಪೊಲೀಸರು ಡ್ರಗ್ಸ್ ಕಡಿಮೆಯಾಯ್ತು ಅಂದುಕೊಳ್ಳುವುದರಲ್ಲಿ ಭಾರಿ ಮೊತ್ತದ ಡ್ರಗ್ಸ್ ಖಾಕಿ ಕಣ್ಮುಂದೆ ಬಂದಿರುತ್ತೆ. ನಗರದ ವಿವಿಪುರ‌ಪೊಲೀಸ್ರು 8 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಮಾಡಿ  ಐವರು ವಿದೇಶಿ ಡ್ರಗ್ ಪೆಡ್ಲರ್ ಗಳು ಆರೆಸ್ಟ್ ಮಾಡಿದ್ದಾರೆ.ರಾಜಧಾನಿ ಬೆಂಗಳೂರನ್ನ ಡ್ರಗ್ಸ್ ಮುಕ್ತ ಮಾಡಲು ಪೊಲೀಸ್ರು ಇನ್ನಿಲ್ಲದ ಕಸರತ್ತು ಮಾಡ್ತಾ ಇರ್ತಾರೆ. ಆದ್ರೆ ಪೆಡ್ಲರ್ ಗಳು ಮಾತ್ರ ನಾವು ಡ್ರಗ್ಸ್ ಮಾರಾಟ ಮಾಡೋದನ್ನ ನಿಲ್ಲಿಸೋದೆ ಇಲ್ಲ ಎಂಬಂತೆ ಭಾರೀ ಡ್ರಗ್ಸ್ ನೊಂದಿಗೆ ಪೊಲೀಸ್ರಿಗೆ ಸಿಕ್ಕಿ ಬೀಳ್ತಾರೆ. ಈಗ ಪೊಲೀಸ್ರಿಂದ ಅಂತಹದೇ ಕಾರ್ಯಾಚರಣೆಯಾಗಿದ್ಸು ಬರೋಬ್ಬರಿ ಎಂಟು ಕೋಟಿ, ಇಪ್ಪತ್ತು ಲಕ್ಷ ಮೌಲ್ಯದ ಡ್ರಗ್ಸ್ ನ್ನ ಬೆಂಗಳೂರು ದಕ್ಷಿಣ ವಿಭಾಗದ ವಿವಿಪುರಂ ಹಾಗೂ ಜಯನಗರ ಠಾಣೆ ಪೊಲೀಸ್ರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಐವರು ವಿದೇಶಿ ಡ್ರಗ್ ಪೆಡ್ಲರ್ ಗಳನ್ನ ಬಂಧನ ಮಾಡಿದ್ದಾರೆ.‌ ಲಾರೆನ್ಸ್, ಚುಕ್ವೂನೇಮ್, ಹಸ್ಲೆ, ಫ್ರಾಂಕ್ ಜಾಗೂ ಇಮ್ಯಾನ್ಯುಲ್ ನಾಝಿ ಬಂಧಿತ ಆರೋಪಿಗಳು.

ವಿವಿಪುರ ಪೊಲೀಸರಿಗೆ ಖಚಿತ ಮಾಹಿತಿಯೊಂದು ಸಿಕ್ಕಿತ್ತು ಮೆಟ್ರೋ‌ ಸ್ಟೇಷನ್ ಒಂದರ ಬಳಿ ಇಬ್ಬರು ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ಸಾರೆ ಎಂದು. ಇದರ ಬೆನ್ನು ಬಿದ್ದ ಪೊಲೀಸ್ರು ಇಬ್ಬರು ಆರೋಪಿಗಳ ಬಂಧನ ಮಾಡಿ ಸ್ವಲ್ಪ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡು ವಿಚಾರಣೆ ಮಾಡಿದಾಗ ಆರೋಪಿಗಳ ಬಳಿಯಿದ್ದ ವೈಟ್ ಎಂ ಡಿ ಎಂ ಎ, ಬ್ರೌನ್ ಎಂಡಿಎಂಎ ಹಾಗೂ 300 ಗ್ರಾಂ ಕೊಕೈನ್ ಪತ್ತೆಯಾಗಿದೆ. ಸಿಂಥೆಟಿಕ್ ಡ್ರಗ್ಸ್ ಮಾದರಿಯ ದುಬಾರಿ ಡ್ರಗ್ಸ್ ಗಳಲ್ಲಿ ಇವುಗಳು ಪ್ರಮುಖವಾಗಿದ್ದು ಇದರ ಬೆಲೆ ಬರೋಬ್ಬರಿ ಏಳು ಕೋಟಿ. ಇನ್ನೂ ಇದೇ ರೀತಿ ಜಯನಗರ ಠಾಣೆ ಪೊಲೀಸ್ರು ಖಚಿತ ಮಾಹಿತಿ ಅಧರಿಸಿ ಮೂವರು ಆರೋಪಿಗಳನ್ನ ಬಂಧನ ಮಾಡಿದ್ದು ಆರೋಪಿಗಳಿಂದ ಬರೋಬ್ಬರಿ 1ಕೋಟಿ 20 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಸದ್ಯ ಆರೋಪಿಗಳಿಂದ ಡ್ರಗ್ಸ್ ವಶಪಡಿಸಿಕೊಂಡಿರುವ ಪೊಲೀಸರಿಗೆ ಇಷ್ಟೊಂದು ಭಾರಿ ಪ್ರಮಾಣದ ಡ್ರಗ್ಸ್ ಯಾರಿಗೆ ಸಫ್ಲೈ ಆಗ್ತಾ ಇತ್ತು ಅನ್ನೋ ಅನುಮಾನ ಶುರುವಾಗಿದೆ.  ಈ ದುಬಾರಿ ಡ್ರಗ್ಸ್ ಗಳನ್ನ ಹೈಪ್ರೊಫೈಲ್ ಜನರು ಬಳಸುತ್ತಿದ್ದು ಯಾರೆಲ್ಲ ಈ ಜಾಲದಲ್ಲಿ ಸಿಕ್ಕಿ ಬೀಳ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments