Webdunia - Bharat's app for daily news and videos

Install App

ಖಾಸಗಿ ವಾಹಿನಿ ಕ್ಯಾಮೆರಾಮನ್ ಮೇಲೆ ಪೊಲೀಸರ ದರ್ಪ

Webdunia
ಬುಧವಾರ, 5 ಸೆಪ್ಟಂಬರ್ 2018 (16:39 IST)
ಖಾಸಗಿ ವಾಹಿನಿ  ಕ್ಯಾಮರಾಮನ್ ಮೇಲೆ ಪೊಲೀಸರು ದರ್ಪ ಮೆರೆದ ಘಟನೆ ನಡೆದಿದೆ. ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ನಾಲ್ವರು ಪೊಲೀಸ್ ಪೇದೆಗಳ ಕೃತ್ಯಕ್ಕೆ ವ್ಯಾಪಕ ಖಂಡನೆ ಪತ್ರಕರ್ತರ ಸಂಘಟನೆಗಳಿಂದ ವ್ಯಕ್ತವಾಗುತ್ತಿದೆ.

ಖಾಸಗಿ ವಾಹಿನಿ  ಕ್ಯಾಮರಾಮನ್ ಸುರೇಶ ಚಿನಗುಂಡಿ ಮೇಲೆ ಪೊಲೀಸರು ದರ್ಪ ಮೆರೆದಿದ್ದಾರೆ. ಕ್ಯಾಮೆರಾಮನ್ ಮೇಲೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ನಾಲ್ವರು ಪೊಲೀಸ್ ಪೇದೆಗಳು. ವಿಜಯಪುರ ನಗರದ ಭೂತನಾಳ ಕೆರೆ ರಸ್ತೆಯಲ್ಲಿ ಘಟನೆ ನಡೆದಿದೆ. ಐ ಆರ್ ಬಿ ಪೊಲೀಸ್ ಪೇದೆ ಬಸವರಾಜ ವಡ್ಡರ ಹಾಗೂ ಇತರೆ ಮೂವರಿಂದ ಹಲ್ಲೆ ನಡೆದಿದೆ.

ಭೂತನಾಳ ರಸ್ತೆಯಲ್ಲಿ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವೇಳೆ ಹಲ್ಲೆಯಾಗಿದೆ. ಐ ಆರ್ ಬಿ ವ್ಯಾನ್ ನಲ್ಲಿದ್ದ ಪೊಲೀಸರಿಂದ ಬೈಕ್ ಮೇಲೆ ಹೊರಟಿದ್ದವನ ಮೇಲೆ ಏಕಾಏಕಿ ಹಲ್ಲೆ ನಡೆದಿದೆ. ಕ್ಯಾಮರಾಮನ್ ಇಕ್ಕಟ್ಟಾದ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಐ ಆರ್ ಬಿ ವ್ಯಾನ್ ಮೈಮೇಲೆ ಹತ್ತಿಸಲು ಪೊಲೀಸ್ ವಾಹನ ಚಾಲಕ ಯತ್ನಿಸಿದ್ದಾನೆ. 

ಈ ಕುರಿತು ಪ್ರಶ್ನಿಸಿದ ಸುರೇಶ ಮೇಲೆ ನಾಲ್ವರಿಂದ ಹಲ್ಲೆ ನಡೆದಿದೆ. ಐ ಆರ್ ಬಿ ವ್ಯಾನ್ ನಲ್ಲಿ ಎಳೆದೊಯ್ದು, ವ್ಯಾನ್ ಒಳಗಡೆಯೇ ಹಲ್ಲೆ ನಡೆಸಿ ದರ್ಪವನ್ನು ಪೊಲೀಸರು ತೋರಿದ್ದಾರೆ. ಗಾಯಗೊಂಡ ಕ್ಯಾಮರಾಮನ್ ಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments