Select Your Language

Notifications

webdunia
webdunia
webdunia
webdunia

ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ: ದೇವೇಗೌಡ ವಿಷಾದ

ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ: ದೇವೇಗೌಡ ವಿಷಾದ
ಬೆಂಗಳೂರು , ಶುಕ್ರವಾರ, 17 ಮಾರ್ಚ್ 2017 (19:44 IST)
ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಅಂಬೇಡ್ಕರ್ ಹಾಕಿ ಕೊಟ್ಟ ಮಾರ್ಗದರ್ಶನವನ್ನು ಮರೆತಿದ್ದೇವೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
 
ಹಿಂದೆ ವಿರೋಧ ಪಕ್ಷದ ನಾಯಕನಾಗಲು ಯಾರು ಮುಂದೆ ಬರುತ್ತಿರಲಿಲ್ಲ. ನಾನು ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ಆದರೆ, ಯಾರ ಮನಸ್ಸಿಗೂ ನೋವು ಉಂಟು ಮಾಡಿಲ್ಲ ಎಂದರು.
 
ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಮಹತ್ವ ಕುಸಿದು ಹೋಗಿದೆ. ರಾಜಕೀಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಮಾಜಿ ಪ್ರಧಾನಿ ವಿಷಾದ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರ ಮನೆಗಳ ಮೇಲೆ ಐಟಿ ದಾಳಿ ನಡೆಸಲು ಸಂಚು: ಡಿ.ಕೆ.ಶಿವಕುಮಾರ್