Select Your Language

Notifications

webdunia
webdunia
webdunia
webdunia

ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನ ಸಂಭವ-ಸಿದ್ದರಾಮಯ್ಯ ಭವಿಷ್ಯ

ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನ ಸಂಭವ-ಸಿದ್ದರಾಮಯ್ಯ ಭವಿಷ್ಯ
bangalore , ಗುರುವಾರ, 16 ನವೆಂಬರ್ 2023 (18:44 IST)
ತನ್ನ ಸಿದ್ಧಾಂತ, ಮೌಲ್ಯಗಳನ್ನು ಗಾಳಿಗೆ ತೂರಿರುವ ಜೆಡಿಎಸ್ ಪಕ್ಷದಿಂದ ‘ಜಾತ್ಯತೀತ ತೆಗೆದು ಹಾಕಬೇಕಾಗಿದೆ. ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಕೇವಲ ಕುಟುಂಬದ ಪಕ್ಷ ಅಷ್ಟೆ. ಸದ್ಯದಲ್ಲೇ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸಂಪೂರ್ಣ ವಿಲೀನ ಆದರೂ ಆಶ್ಚರ್ಯವಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯವನ್ನ ನುಡಿದಿದ್ದಾರೆ. 

ನಾನು ನೀಡಿದ ಲಿಸ್ಟ್ ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಮಾಜಿ ಶಾಸಕ ಡಾ. ಯತೀಂದ್ರ ಅವರು ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಪುತ್ರನ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ , ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೆ ಆಗಿದ್ದಲ್ಲಿ ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

DMK ಅವಧಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ- ಅಣ್ಣಾಮಲೈ