Select Your Language

Notifications

webdunia
webdunia
webdunia
webdunia

ಮುರುಘಾ ಶರಣರಿಂದ ಮತ್ತೆ ಮುರುಘಾ ಮಠದ ಅಧಿಕಾರ!

ಮುರುಘಾ ಶರಣರಿಂದ ಮತ್ತೆ ಮುರುಘಾ ಮಠದ ಅಧಿಕಾರ!
bangalore , ಶುಕ್ರವಾರ, 8 ಡಿಸೆಂಬರ್ 2023 (20:00 IST)
ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್​ನಲ್ಲಿ ಮುರುಘಾ ಶ್ರೀ ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು. ಬಳಿಕ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹಿನ್ನೆಲೆ ಹೈಕೋರ್ಟ್ ಆಡಳಿತಾಧಿಕಾರಿ ನೇಮಕಾತಿ ರದ್ದು ಪಡಿಸಿತ್ತು. ಮುರುಘಾಶ್ರೀ ಜೈಲಿನಲ್ಲಿದ್ದ ಕಾರಣ ಪಿಡಿಜೆಗೆ ತಾತ್ಕಾಲಿಕ ಅಧಿಕಾರ ನೀಡಿತ್ತು. ಅದರಂತೆ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು.

ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಅಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಚಿತ್ರದುರ್ಗ ಪಿಡಿಜೆಯಿಂದ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರಿಸಿ ಹೈಕೋರ್ಟ್​ ಆದೇಶಿಸಿದ ಬೆನ್ನಲ್ಲೇ ಲಕೋಟೆ ಮೂಲಕ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರ ಪತ್ರ ರವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಪ್ರವೇಶಿಸದಂತೆ ಮುರುಘಾಶ್ರೀಗೆ ಹೈಕೋರ್ಟ್ ಷರತ್ತು ನೀಡಿದ ಹಿನ್ನಲೆ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮುರುಘಾ ಶ್ರೀಗಳು ಮಠದ ಆಡಳಿತವನ್ನು ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ.11ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು