Select Your Language

Notifications

webdunia
webdunia
webdunia
webdunia

ಪತ್ರಿಕಾ ರಂಗಕ್ಕೆ ಗೌರವವಿದೆ, ಟೀಕಿಸುವುದು ಸರಿಯಲ್ಲ: ಆರ್.ವಿ.ದೇಶಪಾಂಡೆ

ಪತ್ರಿಕಾ ರಂಗಕ್ಕೆ ಗೌರವವಿದೆ, ಟೀಕಿಸುವುದು ಸರಿಯಲ್ಲ: ಆರ್.ವಿ.ದೇಶಪಾಂಡೆ
ಕಾರವಾರ , ಮಂಗಳವಾರ, 12 ಸೆಪ್ಟಂಬರ್ 2017 (12:49 IST)
ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ಆರ್. ವಿ.ದೇಶಪಾಂಡೆ, ಪತ್ರಿಕಾ ರಂಗಕ್ಕೆ ತನ್ನದೇ ಆದ ಗೌರವವಿದೆ. ಅದನ್ನು ಟೀಕಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕಾರಂಗದವರ ವಿರುದ್ಧ ಟೀಕಿಸುವುದು ಖಂಡನೀಯ. ಜನಪ್ರತಿನಿಧಿಗಳ ಭಾಷಣಕ್ಕೆ ಗೌರವ ಸಿಗಬೇಕೆಂದರೆ ಮಾಧ್ಯಮಗಳ ಪಾತ್ರ ಬಹುಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
 
ಪ್ರಜಾಪ್ರಭುತ್ವದಲ್ಲಿ ಕೇಂದ್ರ ಸಚಿವರಾಗಿ ಮಾಧ್ಯಮಗಳ ಅಗೌರವ ತೋರುವುದು, ಮನಬಂದಂತೆ ಹೇಳಿಕೆ ನೀಡುವುದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಇನ್ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡುವುದು ನಿಲ್ಲಿಸುವುದು ಸೂಕ್ತ ಎಂದರು.
 
ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರಕರ್ತರು ಎಡಬಿಡಂಗಿಗಳು ಎಂದು ಜರಿದು ಮಾಧ್ಯಮಗಳ ಆಕ್ರೋಶಕ್ಕೆ ಕಾರಣವಾಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಣ್ಣಾಡಿಎಂಕೆ ಪಕ್ಷದ ಹುದ್ದೆಯಿಂದ ಶಶಿಕಲಾ ವಜಾ