Webdunia - Bharat's app for daily news and videos

Install App

ಹಿಂದಿನ‌ ಸರ್ಕಾರದ ಬಜೆಟ್ ಮುಂದುವರೆಸಿದ್ದಾರೆ ವಿಪಕ್ಷಗಳ ವಾಗ್ದಾಳಿ..!

Webdunia
ಶುಕ್ರವಾರ, 7 ಜುಲೈ 2023 (19:29 IST)
ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆ ಬಗ್ಗೆ ರಾಜ್ಯದ ಜನರು ಕಾತುರದಿಂದ ಎದುರು ನೋಡ್ತಿದ್ರು.. ಗ್ಯಾರಂಟಿ ಯೋಜನೆಗಳನ್ನ ಈಡೇರುಸ್ತಾರಾ ಇಲ್ಲಾ ಇನ್ನೂ ಕಂಡೀಷನ್ ಹಾಕ್ತಾರಾ ಎಂಬ ಚರ್ಚೆ ಶುರುವಾಗಿತ್ತು. ಬಜೆಟ್  ಮಂಡನೆಗೆ ಸಾಕಷ್ಟು ಲೆಕ್ಕಾಚಾರ ಮಾಡಿ , ಕಳೆದ ೨೦-೨೫ ದಿನಗಳಿಂದ ಸತತವಾಗಿ ಅಧಿಕಾರಿಗಳ ಜೊತೆ ಸಭೆ ಮೇಲೆ ಸಭೆ ಮಾಡಿ ಮಾಹಿತಿಯನ್ನ ಪಡೆದುಕೊಂಡಿದ್ರು ಸಿಎಂ ಸಿದ್ದರಾಮಯ್ಯ. ಅದ್ರಲ್ಲೂ ಹೊಸ ಯೋಜನೆಗಳನ್ನ ಜಾರಿಗೆ ತರಬೇಕಾ, ಗ್ಯಾರಂಟಿ ಯೋಜನೆಗೆ ಎಷ್ಟೆಲ್ಲಾ ಹಣ ಮೀಸಲಿಡಬೇಕು ಅದಕ್ಕೆ ಸಂಪನ್ಮೂಲಗಳ  ಸಂಗ್ರಹ ಹೇಗೆ ಮಾಡೋದು ಅನ್ನೋದನ್ನ ಅಳೆದು ತೂಗಿ ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆ ಮಾಡಿದ್ರು.

ಬಜೆಟ್ ಮಂಡಿಸುತ್ತಿದ್ದಂತೆ ಮಾಜಿ ಸಿಎಂ‌ ಕುಮಾರಸ್ವಾಮಿ ಬಜೆಟ್ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ರು.‌ವಿಧಾನಸೌದದ ತಮ್ಮ ಕಚೇರಿಯಲ್ಲೇ ಬಜೆಟ್ ವೀಕ್ಷಣೆ ಮಾಡ್ತಿದ್ದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಕೇಂದ್ರ ಸರ್ಕಾರ ಹಾಗೂ ಹಿಂದಿನ‌ಸರ್ಕಾರದ ಮೇಲೆ‌ ಗೂಬೆ ಕೂರಿಸುವ ಬಜೆಟ್ ಅಷ್ಟೆ. ದೂಷಣೆ ಮಾಡೋದಕ್ಕೆ ಹೆಚ್ಚಿನ ಪುಟಗಳನ್ನ ಮಾಡಿಕೊಂಡಿದ್ದಾರೆ. ತೆರಿಗೆ ಸಂಗ್ರಹಕ್ಕೆ ಮುಂದಾಗಿದ್ದೀರಾ ಆದ್ರು ೮೫ ಸಾವಿರ ಕೋಟಿ ಸಾಲ ಯಾಕೆ ಮಾಡ್ತಿದ್ದಿರಾ.. ಗ್ಯಾರಂಟಿ ಯೋಜನೆಗಳಿಗೆ ಕಂಡೀಷನ್ ಹಾಕಿ ಜನರಿಗೆ ಟೋಪಿ ಹಾಕಿದ್ದಾರೆ ಅಂತಾ ಕುಮಾರಸ್ವಾಮಿ ಕಿಡಿ ಕಾರಿದ್ರು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments