Webdunia - Bharat's app for daily news and videos

Install App

ಜಿಐ ಮಾನ್ಯತೆಯಿಂದ ತೊಗರಿ ಬೆಲೆ ಹೆಚ್ಚು

Webdunia
ಶುಕ್ರವಾರ, 27 ಸೆಪ್ಟಂಬರ್ 2019 (17:09 IST)
ರಾಜ್ಯದ ಬಿಸಿಲುನಗರಿಯಲ್ಲಿ ಬೆಳೆಯುವ ತೊಗರಿಗೆ ಈಗ ಮತ್ತಷ್ಟು ಮಹತ್ವ ಬಂದಿದೆ.

ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿಐ ಮಾನ್ಯತೆ ಸಿಕ್ಕಿರುವುದರಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೊಗರಿ ತನ್ನದೇಯಾದ ಛಾಪು ಮೂಡಿಸಲಿದೆ. ಹೀಗಂತ ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮಗೌಡ ಬೆಳಗುರ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮಾರುಕಟ್ಟೆ, ಖರೀದಿ ಮತ್ತು ಬೆಲೆಗಳ ವಿಚಾರದ ಬಗ್ಗೆ ತಜ್ಞರು, ರೈತರು ಹಾಗೂ  ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ್ರು.

ಸಾವಯವ ಗೊಬ್ಬರ ಬಳಕೆ ಮಾಡುವ ಮೂಲಕ ಉತ್ತಮ ಗುಣಮಟ್ಟದ ತೊಗರಿ ಬೆಳೆಯನ್ನು ಬೆಳೆಯಬೇಕು ಎಂದ್ರು. 
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಕೆಲ ರೈತರು ಹವಾಮಾನ ಆಧಾರಿತ ತೋಟಗಾರಿಕಾ ಬೆಳೆ ಪದ್ಧತಿ ಮಾಡುತ್ತಿದ್ದು, ಈ ಹವಾಮಾನ ಆಧಾರಿತ ಬೆಳೆಗೆ ಮಾತ್ರ ಬೆಳೆ ವಿಮೆ ನೀಡಲಾಗುತ್ತದೆ ಎಂದ್ರು.

ಒಂದು ವೇಳೆ ಹವಾಮಾನದಲ್ಲಿ ಏರು-ಪೇರು ಉಂಟಾಗಿ ಎಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಮೀಟರ್‍ನಲ್ಲಿ ವರದಿಯಾಗುತ್ತದೆ. ಅದರ ಆಧಾರದ ಮೇಲೆ ರೈತರಿಗೆ ಬೆಳೆ ವಿಮೆ ನೀಡಲಾಗುತ್ತದೆ ಎಂದ ಅವರು, ಬೆಳೆ ವಿಮೆ ಬಗ್ಗೆ ಇದ್ದ ಗೊಂದಲವನ್ನು ಪರಿಹರಿಸಿದರು.

3 ತಿಂಗಳ ಬೆಳೆಯಾದ ಹೆಸರಿಗೆ 7150 ರೂ. ಬೆಲೆ ನಿಗದಿ ಮಾಡಲಾಗಿದೆ. ಆರು ತಿಂಗಳಲ್ಲಿ ಬರುವ ತೊಗರಿ ಬೆಳೆಗೆ 5 ಸಾವಿರ ರೂ. ಬೆಲೆ ನಿಗದಿ ಮಾಡಲಾಗಿದೆ. ಈ ಮೂಲಕ ರೈತರು ಬೆಳೆದ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು ಎನ್ನುವ ಅನ್ನದಾತರ ಬಹುದಿನದ ಬೇಡಿಕೆ ಈಡೇರಿದೆ ಎಂದು ಸಂತಸ ವ್ಯಕ್ತಪಡಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments