ಒಂದೆಡೆ ಮಳೆ ಮತ್ತೊಂದೆಡೆ ಕುಡಿಯುವ ನೀರಿಗಾಗಿ ಹಾಹಾಕಾರ..!

Webdunia
ಶುಕ್ರವಾರ, 21 ಸೆಪ್ಟಂಬರ್ 2018 (17:09 IST)
ಉತ್ತರ ಕರ್ನಾಟಕ ಕೆಲವೆಡೆ ಮಳೆ ನಿರಂತರವಾಗಿ ಸುರಿಯುತ್ತಿದ್ದರೆ, ಮತ್ತೊಂದು ಕಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಪುಟಪಾಕ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಗಡಿಯಲ್ಲಿರುವ ಪುಟಪಾಕ ಗ್ರಾಮ ತೆಲಂಗಾಣ ರಾಜ್ಯದ ವಾಣಿಜ್ಯ ಪಟ್ಟಣ ನಾರಾಯಣಪೇಟಕ್ಕೆ ಹೋಗುವ ಹೆದ್ದಾರಿಯಲ್ಲಿದೆ. ಗುರುಮಠಕಲ್‌ನಿಂದ 10 ಕಿ.ಮೀ ದೂರದಲ್ಲಿದೆ. ಈ ಬಾರಿಯ ಮುಂಗಾರು ಇನ್ನೂ ಮುಗಿದಿಲ್ಲ, ಆದ್ರೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ‌.

ಗ್ರಾಮದ ನಲ್ಲಿಗಳಲ್ಲಿ ಕುಡಿಯುವ ನೀರು ಬಾರದೇ ಇರುವುದರಿಂದ 2 ಕಿ.ಮೀ ವರೆಗೂ ನಡೆದುಕೊಂಡೇ ಗ್ರಾಮಸ್ಥರು ಖಾಸಗಿ ಬಾವಿ, ಕೊಳವೆ ಬಾವಿಗಳಿಂದ ನೀರನ್ನು ಹೊತ್ತು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ  
ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಅನ್ನೋದು ಗ್ರಾಮಸ್ಥರ ಆಗ್ರಹವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments