Webdunia - Bharat's app for daily news and videos

Install App

ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ : ಸಿದ್ದರಾಮಯ್ಯ

Webdunia
ಸೋಮವಾರ, 20 ಜೂನ್ 2022 (13:38 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ 2 ದಿನ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೋದಿಗೆ ಶುಭ ಹಾರೈಸಿದ್ದಾರೆ ಹಾಗೂ ಇದು ಸರ್ಕಾರದ ಹೆಮ್ಮೆಯ ಯೋಜನೆ ಎಂದಿದ್ದಾರೆ.

ಡಾ. ಬಿಆರ್ ಅಂಬೇಡ್ಕರ್ ಅವರ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡದ ಯೋಜನೆಗೆ ತಮ್ಮ ಸರ್ಕಾರ ಬಿಡುಗಡೆ ಮಾಡಿದ್ದ ಹಣ ಹಾಗೂ ಜಾಗದ ಬಗ್ಗೆ ಪ್ರಸ್ತಾಪಿಸಿ, ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 5 ವರ್ಷಗಳ ಹಿಂದೆ(4-10-2017)ರಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಂಗಳೂರಿಗೆ ಬಂದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ ಬಾಬಾಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಕಾಲದ ಮಧುರ ಮತ್ತು ಸಾರ್ಥಕ ನೆನಪು ಎಂದು ಮೆಲುಕು ಹಾಕಿದ್ದಾರೆ.

ವಿಶ್ವ ಕಂಡ ಅಪ್ರತಿಮ ಆರ್ಥಿಕ ತಜ್ಞ ಡಾ.ಬಿಆರ್ ಅಂಬೇಡ್ಕರ್ ಅವರ 125ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನೆನಪಿಗೆ ಅರ್ಥಪೂರ್ಣವಾದ ಸ್ಮಾರಕರೂಪದಲ್ಲಿ ಯೋಜನೆಯೊಂದನ್ನು ರೂಪಿಸಬೇಕೆಂಬ ನಮ್ಮ ಸರ್ಕಾರದ ಕನಸು ನನಸಾಗಿ ರೂಪುಗೊಂಡದ್ದು ಬಾಬಾಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments