Webdunia - Bharat's app for daily news and videos

Install App

ಜನೌಷಧಿ ಗುಣಮಟ್ಟದಿಂದ ಕೂಡಿಲ್ವಾ?: ಬಿಜೆಪಿ ಸಂಸದ ಹೇಳಿದ್ದೇನು?

Webdunia
ಭಾನುವಾರ, 8 ಮಾರ್ಚ್ 2020 (18:50 IST)
ಜನೌಷಧಿ ಗುಣಮಟ್ಟದಿಂದ ಕೂಡಿಲ್ಲ ಅಂತ ಕೆಲವರು ವದಂತಿಗಳನ್ನು ಹರಡಿಸುತ್ತಿವುದರ ವಿರುದ್ಧ ಬಿಜೆಪಿ ಸಂಸದ ಕಿಡಿಕಾರಿದ್ದಾರೆ.

ಜನೌಷಧಿ ಮಾತ್ರೆಗಳು ಗುಣಮಟ್ಟದಿಂದ ಕೂಡಿದೆ. ಕೆಲವರು ಅನಾವಶ್ಯಕವಾಗಿ ಕಡಿಮೆ ದರದ ಜನೌಷಧಿ ಮಾತ್ರೆಗಳು ಗುಣಮಟ್ಟವಿಲ್ಲವೆಂದು ಜನರನ್ನು ತಪ್ಪು ದಾರಿಗೆ ಎಳೆಯಲು ಬಯಸುತ್ತಿದ್ದಾರೆ. ಇದ್ಯಾವುದಕ್ಕೂ ಕಿವಿಗೊಡಬೇಡಿ ಎಂದು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಹೇಳಿದ್ದಾರೆ.

ಜನೌಷಧಿ ಮಾತ್ರೆಗಳು ಜಿ.ಎಂ.ಪಿ. ದೃಢೀಕೃತ ಮಾತ್ರೆಗಳಾಗಿದ್ದು, ಶೇ.100ರಷ್ಟು ಗುಣಮಟ್ಟದಿಂದ ಕೂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಪೋಷಣ ಅಭಿಯಾನ ಮತ್ತು ಜನೌಷಧಿ ದಿವಸ್ ನಾಲ್ಕನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.  ಬಡಜನರ ಪಾಲಿಗೆ ಸಂಜೀವಿನಿಯಾಗಿರುವ ಜನೌಷಧಿ ಕೇಂದ್ರಗಳು ಪ್ರತಿ ಸ್ಲಮ್, ಕಾಲೋನಿ, ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೆರೆಯುವಂತಾಗಲಿ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಅಭಿಪ್ರಾಪಟ್ಟರು.

ದುಡಿದು ತಿನ್ನುವ ಬಡಜನರು ಮಾರಣಾಂತಿಕ ಕಾಯಿಲೆಗೆ ತುತ್ತಾದರೆ ಆಸ್ಪತ್ರೆ, ಔಷಧಿ ಅಂತ ಅಲೆಯಬೇಕಾಗುತ್ತದೆ. ಮೊದಲೇ ಆರ್ಥಿಕವಾಗಿ ಕುಗ್ಗಿರುವವರಿಗೆ ಇದು ಗಾಯದ ಮೇಲೆ ಬರೆ ಎಳೆದಂತೆ. ಹೀಗಾಗಿ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಸರ್ವರಿಗೂ ಸಿಗಬೇಕು ಎಂಬ ಸದುದ್ದೇಶದಿಂದ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರಗಳು ತೆರೆದಿದ್ದು, ಇಲ್ಲಿ ಶೇ.50 ರಿಂದ 75ರ ವರೆಗೆ ಕಡಿಮೆ ದರದಲ್ಲಿ ಔಷಧಿಗಳು ಸಿಗುತ್ತವೆ ಎಂದರು.

ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಆರೋಗ್ಯ ದೃಷ್ಠಿಯಿಂದ ಜನೌಷಧಿ ಕೇಂದ್ರಗಳಲ್ಲಿ ನ್ಯಾಪಕಿನ್ ಪ್ಯಾಡ್ 1 ರೂ. ಗಳಿಗೆ ನೀಡಲಾಗುತ್ತಿದೆ. ಶಾಲಾ-ಕಾಲೇಜು, ಗ್ರಾಮಗಳಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತೆಯರು ಇದರ ಬಗ್ಗೆ ಆಂದೋಲನದ ಮಾದರಿಯಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments