Daily Horoscope

ಕೊಡಗಿನಲ್ಲಿ ಹಿಂದಿನಂತೆ ಮಳೆ ಬೀಳೋದಿಲ್ಲ ಅಂತ ಹೇಳಿದವರಾರು ಗೊತ್ತಾ?

Webdunia
ಗುರುವಾರ, 23 ಆಗಸ್ಟ್ 2018 (15:12 IST)
ಕೊಡಗಿನಲ್ಲಿ ಹಿಂದಿನಂತೆ ಮಳೆ ಬೀಳೋದಿಲ್ಲ, ಹಲವು ಪ್ರದೇಶಗಳು ವಾಸಿಸಲು ಯೋಗ್ಯವಲ್ಲ ಹೀಗಂತ ಹೇಳುತ್ತಿದ್ದಾರೆ ತಜ್ಞರು.
ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದ ಇಸ್ರೋ ವಿಜ್ಞಾನಿಗಳು ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಕೊಡಗಿನ ಜೋಡುಪಾಲ ಹಾಗೂ ಅರೆಕಲ್‌ಗೆ ಭೇಟಿ ನೀಡಿದ ಇಸ್ರೋ ವಿಜ್ಞಾನಿಗಳು, ಸ್ಥಳಗಳ ಗಂಭೀರತೆಯನ್ನು ಪರೀಕ್ಷಿಸಿದರು. ತೀವ್ರ ಮಳೆಯಿಂದಾಗಿಯೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗುಡ್ಡ ಪ್ರದೇಶಗಳಲ್ಲಿ ನೀರು ಇಂಗಿ ಸ್ಫೋಟದ ಮೂಲಕ ಹೊರಬಂದಿದೆ. ಪ್ರಕೃತಿ ಮಾತ್ರವಲ್ಲ, ಮಾನವನ ಕೃತ್ಯಗಳೂ ಇದಕ್ಕೆ ಕಾರಣವಾಗಿದ್ದು, ಕೊಡಗಿನಲ್ಲಿ ಹಿಂದಿನಂತೆ ಮಳೆ ಬೀಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಇನ್ನು ಮುಂದೆ ಮಳೆ ಕಡಿಮೆಯಾಗುವ ಗಂಭೀರ ವಿಚಾರವನ್ನು ಪ್ರಸ್ತಾಪ ಮಾಡಿದರು.

ಮದೆನಾಡು, ಜೋಡುಪಾಲ ಹಾಗೂ ಅರೆಕಲ್ ಸೇರಿದಂತೆ ಹಲವು ಪ್ರದೇಶಗಳು ವಾಸಕ್ಕೆ ಯೋಗ್ಯವಾಗಿಲ್ಲ. ಈ ಪ್ರದೇಶಗಳಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆಯಿದೆ. ಪ್ರಸ್ತುತ ಪ್ರಾಥಮಿಕ ವರದಿಯನ್ನಷ್ಟೇ ನೀಡುತ್ತೇವೆ. ಇನ್ನೊಂದು ತಂಡ ಬಂದು ಪೂರ್ಣ ಪರಿಶೀಲನೆ ನಡೆಸಲಿದೆ. ಪೂರ್ಣ ತನಿಖೆಯ ಬಳಿಕವೇ ಅಂತಿಮ ವರದಿ ನೀಡುತ್ತೇವೆ ಎಂದಿದ್ದಾರೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments