Webdunia - Bharat's app for daily news and videos

Install App

ನಿರ್ಮಾಣ ಆದ ಒಂದೇ ತಿಂಗಳಿಗೆ ಬಿರುಕು ಬಿಟ್ಟ ರಾಪಿಡ್ ರೋಡ್

Webdunia
ಶನಿವಾರ, 7 ಜನವರಿ 2023 (14:16 IST)
ಹಳೆ ಮದ್ರಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ರಾಪಿಡ್ ರೋಡ್ ಬಿರುಕುಬಿಟ್ಟಿದ್ದು ಇದಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ.ಕೋಟಿ ವೆಚ್ಚದಲ್ಲಿ ಶರವೇಗದಲ್ಲಿ ನಿರ್ಮಾಣ ಆದ ರಸ್ತೆ ಮಿಂಚಿನ ವೇಗದಲ್ಲಿ ದುರಸ್ತಿಗೆ ಒಳಗಾಗಿದೆ.
 
ಹೊಸ ತಂತ್ರಜ್ಞಾನದ ನೆಪದಲ್ಲಿ ಕಳಪೆ ಕಾಮಗಾರಿ ಆಗಿದ್ಯಾ ಅನ್ನುವ ಶಂಕೆ ವ್ಯಕ್ತವಾಗಿದೆ.ದೇಶದ ಪ್ರಥಮ ರಾಪಿಡ್ ರಸ್ತೆ ಅಂತ ಬಿಬಿಎಂಪಿ ಬಿಂಬಿಸಿತ್ತು.ಆದ್ರೆ ಈಗ ರಸ್ತೆಯಲ್ಲಿ ಬಿರುಕುಬಿದ್ದಿದೆ.ರಸ್ತೆ ರೆಡಿಯಾಗಿದ್ದೂ ಬೇಗವಾದ್ರು ಸಿಎಂ ಉದ್ಘಾಟನೆಗೆ ಒಂದಷ್ಟು ದಿನ ಕಾಯಬೇಕಾದ ಪರಿಸ್ಥಿತಿಯಿತ್ತು .ಆದ್ರೆ ಸಿಎಂ ಬೊಮ್ಮಾಯಿಯಿಂದ  ಉದ್ಘಾಟನಾ ಭಾಗ್ಯ ಸಿಕ್ಕರೂ ಕಳಪೆ ಕಾಮಗಾರಿಯಿಂದ ಮತ್ತೆ ವಾಹನ ಸವಾರರು ಪರದಾಡಯವಂತಾಗಿದೆ.337.5 ಮೀಟರ್‌ ರಸ್ತೆಯನ್ನು ಪ್ರೀಕಾಸ್ಟ್‌ ಪೋಸ್ಟ್‌ ಟೆನ್ಷನಿಂಗ್‌ ಪೇವ್‌ಮೆಂಟ್‌ ತಂತ್ರಜ್ಞಾನದ ಮೂಲಕ ನಿರ್ಮಾಣ ಮಾಡಲಾಗಿತ್ತು.ಪ್ರಾಯೋಗಿಕವಾಗಿ ನಿರ್ಮಿಸಲಾಗಿರುವ ಈ ರ್ಯಾಪಿಡ್ ರಸ್ತೆ ಮೂರ್ನಾಲ್ಕು ಕಡೆ ಬಿರುಕುಬಿದ್ದಿದೆ.ಪ್ರೀಕಾಸ್ಟ್‌ ಪ್ಯಾನೆಲ್‌ ನಿರ್ಮಾಣದಲ್ಲಿ ಗುಣಮಟ್ಟದ ಸಿಮೆಂಟ್‌ ಮಿಶ್ರಣ ಇಲ್ಲದ್ದೇ ಇದಕ್ಕೆ ಕಾರಣ ಅನ್ನೋ ಆರೋಪ ಕೇಳಿಬಂದಿದೆ. ಕ್ಷಿಪ್ರವಾಗಿ ರಸ್ತೆ ನಿರ್ಮಾಣವಾಗಿದೆ ಎಂದು ಸಂತಸದಲ್ಲಿದ್ದ ನಾಗರಿಕರು ಕಳಪೆ ಕಾಮಗಾರಿ ಕಂಡು ನಿಗಿ ನಿಗಿ  ಕೆಂಡಕಾರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments