ಮುಖ್ಯಮಂತ್ರಿಯಿಂದ ಉದ್ಘಾಟನೆಗೊಂಡ ಒಂದೇ ತಿಂಗಳಲ್ಲಿ ರ್ಯಾಪಿಡ್ ರಸ್ತೆ ದುರಸ್ಥಿ

Webdunia
ಶನಿವಾರ, 7 ಜನವರಿ 2023 (19:17 IST)
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳ ಎಂದರೆ ಬರಿ ಗುಂಡಿಗಳಿಂದ ಕುಡಿದ ರಸ್ತೆ ಗುಂಡಿಗಳೆಂದು ಭಾಸವಾಗುತ್ತದೆ. ಅದರಿಂದಾಗಿರುವ ಅನಾಹುತಗಳೆ ಸಾಕ್ಷಿ, ಆದರೆ ಇವುಗಳನ್ನು ತಪ್ಪಿಸಲ ಬಿಬಿಎಂಪಿ ಉತ್ತಮ ಉಪಾಯ ಮಾಡಿತ್ತು. ಆಧುನಿಕವಾಗಿ ಟೆಕ್ನಾಲಜಿ ಬಳಸಿ ಬೆಂಗಳೂರಿನಲ್ಲಿ ರಸ್ತೆ ನಿರ್ಮಾಣ ಕೂಡ ಮಾಡಿದೆ. ಆದ್ರೆ ಇದೀಗಾ ಈ ಕಾಮಗಾರಿ ಕಳಪೆ ಪಟ್ಟಿಗೆ ಸೇರಿದೆ. 

ರಸ್ತೆ ಗುಂಡಿಗೆ ಮುಕ್ತಿಯಾಡುವ ಉದ್ದೇಶದಿಂದ ದೇಶದಲ್ಲೇ ಪ್ರಥಮ ಬಾರಿಗೆ ರ್ಯಾಪಿಡ್ ರಸ್ತೆ ಹಾಕಲಾಗಿತ್ತು. ಈ ರ್ಯಾಪಿಡ್ ರಸ್ತೆ ವರ್ಷಾನುಗಟ್ಟಲೆ ಬಾಳಿಕೆ ಬರುತ್ತೆ ಅಂತಿದ್ದ ಬಿಬಿಎಂಪಿ ಅಧಿಕಾರಿಗಳು ಇದೀಗಾ ಬೈಕ್ ಸವಾರರ ಶಾಪಕ್ಕೀಡಾಗಿದ್ದಾರೆ. ಯಾಕಂದ್ರೆ ಅದೇ ರ್ಯಾಪಿಡ್ ರೋಡ್ನಲ್ಲಿ ಇದೀಗಾ ಬಿರುಕು ಕಾಣಿಸಿಕೊಂಡಿದೆ. ಬಿಬಿಎಂಪಿಯ ಮತ್ತೊಂದು ಹೊಸ ಐಡಿಯಾ ಅಟ್ಟರ್ ಪ್ಲಾಪ್ ಆಗಿದೆ.

337.5 ಮೀಟರ್ ಉದ್ದದ ರಸ್ತೆಯನ್ನು ಪ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಪೇವ್ಮೆಂಟ್ ತಂತ್ರಜ್ಞಾನದ ಮೂಲಕ ನಿರ್ಮಾಣ ಮಾಡಲಾಗಿತ್ತು. ದೇಶದಲ್ಲೇ ಪ್ರಪ್ರಥಮ ಎನ್ನಲಾದ ರ್ಯಾಪಿಡ್ ರಸ್ತೆಯನ್ನು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಲೋಕಾರ್ಪಣೆ ಮಾಡಿ ಈ ರಸ್ತೆ ಯಶಸ್ವಿಯಾದರೆ ಇತರ ಹಲವು ಕಡೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದ್ರೇ ಇದೀಗಾ ಅದೇ ರಸ್ತೆಯಲ್ಲಿ ಬಿರುಕು ಮೂಡಿದೆ.ಘಟನೆ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ತುಷಾರ್ ಗಿರೀನಾಥ್ ಪ್ರತಿಕ್ರಿಯೆ ನೀಡಿದ್ದು ಇದು ಪ್ರಯೋಗತ್ಮಕ ರಸ್ತೆ ಆಗಿದೆ .ಯಾವ ಕಾರಣದಿಂದ ಆಗಿದೆ ಅಂತ IISC ಅವರು ತಮ್ಮ ರಿಪೋರ್ಟ್ ನಲ್ಲಿ ಹೇಳಲಿದ್ದಾರೆ. ಆ ರಿಪೋರ್ಟ್ ಇನ್ನು ನಮಗೆ ತಲುಪಿಲ್ಲ ,ತಲುಪಿದ ನಂತರ ಇನ್ನು ಮುಂದೆ ಏನು ಮಾಡಬೇಕು ಅಂತ ಯೋಚನೆ ಮಾಡ್ತೀವಿ .ಅಲ್ಲದೆ ಇದಕ್ಕೆ ಆಗುವ ಆರ್ಥಿಕ ಎಷ್ಟು ಆಗಲಿದೆ, ರಸ್ತೆ ಅಳತೆ ಎಷ್ಟಿರಬೇಕು ಅಂತ ವೈಜ್ಞಾನಿಕವಾಗಿ ಸಲಹೆ ಪಡೆದು ನಿರ್ಧಾರ ಮಾಡುತ್ತೇವೆ. ಅದನ್ನೆಲ್ಲ ತೆಗೆದುಕೊಂಡು ನಾವು ಮುಂದಕ್ಕೆ ಹೋಗ್ತೇವೆ  ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಒಟ್ಟಾರೆ  ಬಿಬಿಎಂಪಿ ಹೊಸ ಪ್ಪಯತ್ನ ಮಾಡ್ತಿದೆ, ಆದ್ರೆ ಅದು ಸಹ ಕಳಪೆ ಕಾಮಗಾರಿ ಲಿಸ್ಟ್ ಗೆ ಆಲ್ರೆಡಿ ಬಂದಿದೆ . ಇದನ್ನು ಕಂಡ ಜನರು ಮಾತ್ರ ಬೇಸತ್ತುಹೋಗಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಒಂದಲ್ಲ ಒಂದು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. 



 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments