Webdunia - Bharat's app for daily news and videos

Install App

ಕಾಡ್ಗಿಚ್ಚಿಗೆ ಬೆದರಿದ ವನ ಚೇತರಿಸಿಕೊಳ್ಳುತ್ತಿರುವ ಪರಿ ಅದ್ಭುತ

Webdunia
ಬುಧವಾರ, 1 ಮೇ 2019 (17:32 IST)
ಅದು ದೇಶದಲ್ಲೇ ಅತ್ಯಂತ ಪ್ರಸಿದ್ಧವಾದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ. ಇತ್ತೀಚಿಗೆ ಅಲ್ಲಿ ಹಿಂದೆಂದೂ ಕಂಡಿರದ ಕಾಡ್ಗಿಚ್ಚು ಉಂಟಾಗಿ ದೊಡ್ಡ ದುರಂತವೇ ನಡೆದು ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿತ್ತು. ಆದರೆ ಈಗ ತನ್ನ ಎಂದಿನ ಸೌಂದರ್ಯಕ್ಕೆ ಹಿಂದುರುಗಲು ಹವಣಿಸುತ್ತಿದೆ.

ಬಿರುಬೇಸಿಗೆಯಿಂದ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದ ಬಂಡಿಪುರ ಅರಣ್ಯ ಪ್ರದೇಶ ಈಗ ಮಳೆ  ನಿಧಾನವಾಗಿ ಚೇತರಿಸಿಕೊಂಡು ಚಿಗುರೊಡೆಯುತ್ತಿದೆ.

ಇದೋ ದಡ್ಡ ಕಾನನ, ಕಾನನದ ನಡುವೆ ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಜೀವಿಗಳು, ಕಾಡಿನ ಮಧ್ಯ ಹಾದು ಹೋಗುವ ವಾಹನಗಳು, ಬೆಂದು ಬೂದಿಯ ದಿಬ್ಬದಂತಿದ್ದ ಪ್ರದೇಶ, ನಿಧಾನವಾಗಿ ಹಸಿರುಗೂಡುತ್ತಿರುವ ವನಸಂಪತ್ತು. ನಿರಾಳ ಭಾವದಿಂದ ವಿರಮಿಸುತ್ತಿರುವ ವನ್ಯ ಮೃಗಗಳು. ಪ್ರವಾಸಿಗರನ್ನು ಮತ್ತೆ ಕೈ ಬೀಸಿ ಕರೆಯುತ್ತಿರುವ ಉದ್ಯಾನವನ. ಅಂದಹಾಗೆ ಇಷ್ಟೆಲ್ಲಾ ದೃಶ್ಯವಳಿಗಳು  ಕಂಡು ಬರುವುದು ಬೇರೆಲ್ಲೂ ಅಲ್ಲ ಗಡಿ ಜಿಲ್ಲೆ ಚಾಮರಾಜನಗರದಲ್ಲಿರುವ ಬಂಡಿಪುರದ ರಾಷ್ಟ್ರೀಯ ಉದ್ಯಾನವನದಲ್ಲಿ.

ಕಳೆದ ಎರಡು ತಿಂಗಳ ಹಿಂದೆ ಉಂಟಾದ ಭೀಕರ ಕಾಡ್ಗಿಚ್ಚಿಗೆ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿಹೋಗಿತ್ತು. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಇತಿಹಾಸದಲ್ಲೇ ಕಂಡುಕೇಳರಿಯದ ರೀತಿಯಲ್ಲಿ ಬೆಂಕಿ ಅವಘಡ ಸಂಭವಿಸಿ ವನ್ಯಜೀವಿಗಳು ನಲುಗಿಹೋಗಿದ್ದವು.ಈ ಭೀತಿ ಕಳೆದ ಎರಡು ವಾರದಿಂದ ದೂರವಾಗಿದೆ. ಕಾರಣ ಭಯಂಕರ ಕಾಡ್ಗಿಚ್ಚಿನಿಂದ ನಲುಗಿಹೋಗಿದ್ದ ಕಾಡಿಗೆ ಮಳೆರಾಯನ ಸ್ಪರ್ಶವಾಗಿ ಈಗ ಮತ್ತೆ ಜೀವ ಕಳೆ ತುಂಬುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments