Webdunia - Bharat's app for daily news and videos

Install App

ಮೈತ್ರಿ ಸರಕಾರಕ್ಕೆ ಶಾಕ್ ನೀಡಿದ ಮತ್ತೊರ್ವ ಸಚಿವರ ರಾಜೀನಾಮೆ?

Webdunia
ಶುಕ್ರವಾರ, 5 ಜುಲೈ 2019 (19:49 IST)
ಮೈತ್ರಿ ಸರಕಾರದಲ್ಲಿ ಕೈ ಪಡೆಯ ಶಾಸಕರು ರಾಜೀನಾಮೆ ನೀಡುತ್ತಿರುವಂತೆ ಸಚಿವರೊಬ್ಬರು ತಾವೂ ರಾಜೀನಾಮೆ ನೀಡೋದಾಗಿ ಹೇಳುವ ಮೂಲಕ ಚರ್ಚೆಗೆ ಬಂದಿದ್ದಾರೆ.

ಆಗಸ್ಟ್ 10 ರೊಳಗಾಗಿ ವಿವಿ ಸಾಗರಕ್ಕೆ ನೀರು ಹರಿಸದಿದ್ದರೆ ರಾಜೀನಾಮೆಯೇ ನೀಡಿಯೇ ಸಿದ್ಧ. ಹೀಗಂತ ತುಂಬಿದ ಸಭೆಯಲ್ಲಿ ಬಹಿರಂಗವಾಗಿ ರಾಜೀನಾಮೆ ಕುರಿತು ಮಾತಾಡಿದ್ದಾರೆ‌ ಸಚಿವರೊಬ್ಬರು.

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಈ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಹೇಳಿಕೆ ನೀಡಿರುವ ಸಚಿವರು, ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸಲು ಆಗ್ರಹಿಸಿ ಕೈಗೊಂಡಿದ್ದ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ರು.

ಹಿರಿಯೂರು ವಕೀಲರ ಸಂಘದಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ನೀರು ಹರಿಸದಿದ್ದರೆ ರಾಜಿನಾಮೆ ನೀಡುವುದಾಗಿ ವಾಗ್ದಾನ ಮಾಡಿದ್ರು.

ಜುಲೈ 30 ರ ವೇಳೆಗೆ ಮಳೆ ಆಗುತ್ತೆ. ಆ ನಂತರ ವಾಣಿ ವಿಲಾಸ ಸಾಗರಕ್ಕೆ ನೀರು ಬರುತ್ತೆ. ಆಗಸ್ಟ್ 10 ರ‌ ಒಳಗಾಗಿ ‌ನೀರು ಬರದಿದ್ದರೆ‌ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹೋಗುತ್ತೇನೆ. ನನ್ನ ಮಾತು ತಪ್ಪುವುದಿಲ್ಲ. ನಾನು ಕೂಡಾ ರೈತನ ಮಗ ಎಂದ ವೆಂಕಟರಮಣಪ್ಪ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments