Webdunia - Bharat's app for daily news and videos

Install App

ಸೋಮವಾರದವರೆಗೂ ರೆಸಾರ್ಟ್‌ ಬಂಧನ!

geetha
ಶನಿವಾರ, 3 ಫೆಬ್ರವರಿ 2024 (18:22 IST)
ಹೈದರಾಬಾದ್‌ : ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿರುವ ಚಂಪಿ ಸೊರೇನ್‌ ಸೋಮವಾರ ಸದನದಲ್ಲಿ ತಮ್ಮ ಬಲಾಬಲ ಪ್ರದರ್ಶಿಸಲಿರುವುದರಿಂದ ಅದೇ ದಿನದಂದು ಕಾಂಗ್ರೆಸ್‌ ಶಾಸಕರನ್ನು ನೇರವಾಗಿ ಕರೆತರಲಾಗುವುದು. ಸಧ್ಯಕ್ಕೆ ಜಾರ್ಖಂಡ್‌ ನಲ್ಲಿ ಜೆಎಂಎಂ -29, ಕಾಂಗ್ರೆಸ್‌ -16, ಆರ್‌ಜೆಡಿ-1 ಸ್ಥಾನಗಳಲ್ಲಿ ಜಯಗಳಿಸಿ ಸರ್ಕಾರ ನಡೆಸುತ್ತಿದೆ. ಬಿಜೆಪಿ 32 ಸ್ಥಾನಗಳನ್ನು ಹೊಂದಿದ್ದು, 41 ಸ್ಥಾನಗಳನ್ನು ಪಡೆದವರು ಸರ್ಕಾರ ರಚಿಸಬಹುದಾಗಿದೆ. ಬಿಜೆಪಿ  ಕೇವಲ 9 ಸ್ಥಾನ ಕಡಿಮೆ ಇರುವುದರಿಂದ ಕಾಂಗ್ರೆಸ್‌ ಮತ್ತು ಜೆಎಂಎಂ ಗೆ ಆಪರೇಷನ್‌ ಭೀತಿ ಎದುರಾಗಿದೆ. 

ಜಾರ್ಖಂಡ್‌ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ ನಡೆದಿರುವ ಬೆನ್ನಲ್ಲೇ ಅಲ್ಲಿನ  ಜೆಎಂಎಂ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್‌ ಶಾಸಕರ ಆಪರೇಷನ್‌ ಭೀತಿ ಶುರುವಾಗಿದೆ. ಹೀಗಾಗಿ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಹೈದರಾಬಾದ್‌ ಹೊರವಲಯದಲ್ಲಿರುವ ರೆಸಾರ್ಟ್‌ ನಲ್ಲಿ ಕಲೆಹಾಕಲಾಗಿದ್ದು, ಸೋಮವಾರದವರೆಗೂ ವಾಸ್ತವ್ಯ ಕಲ್ಪಿಸಲಾಗಿದೆ. ಅಕ್ರಮ ಹಣ ವರ್ಗವಣೆ ಆರೋಪದಡಿಯಲ್ಲಿ ಸಿಎಂ ಹೇಮಂತ್‌ ಸೊರೇನ್‌ರನ್ನು ಇ.ಡಿ ಬಂಧನಕ್ಕೊಳಪಡಿಸಿದ ಬಳಿಕ ಚಂಪಿ ಸೊರೇನ್‌ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments