ಹತ್ತು ದಿನಗಳೊಳಗೆ ರಸ್ತೆ ಗುಂಡಿ ಮುಚ್ಚಬೇಕು

Webdunia
ಶುಕ್ರವಾರ, 1 ಅಕ್ಟೋಬರ್ 2021 (21:33 IST)
ನಗರದಲ್ಲಿ ಮುಖ್ಯ ರಸ್ತೆಗಳ ಗುಂಡಿ ಮುಚ್ಚುವ ಕೆಲಸ ಹತ್ತು ದಿನಗಳ ಒಳಗೆ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದರು. 
 
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿಂದು ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿನ್ನೆ ಕಂದಾಯ ಸಚಿವರ ಮುಂದೆ ರಸ್ತೆ ಪರಿಸ್ಥಿತಿ ಪರಿಶೀಲನೆ ಆಗಿದೆ, ಎಲ್ಲಾ ವಿಚಾರಗಳನ್ನು ವಲಯವಾರು ಮುಖ್ಯ ಅಭಿಯಂತರರು ಮಾಹಿತಿ ಕೊಟ್ಟಿದ್ದಾರೆ. ವಾರ್ಡ್ ರಸ್ತೆಗಳ ಗುಂಡಿಗಳನ್ನು 20 ದಿನಗಳಲ್ಲಿ ಮುಚ್ಚುವಂತೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
 
ಬೆಂಗಳೂರು ಹೊರವಲಯ ಬಿಡಬ್ಲ್ಯೂಎಸ್‍ಎಸ್‍ಬಿ ಕಾಮಗಾರಿಯಿಂದ ಬಹಳ ಹಾಳಾಗಿದೆ. 2,500 ಕಿ.ಮೀ. ರಸ್ತೆಯನ್ನು ಕತ್ತರಿಸಲಾಗಿದೆ, ಇದಕ್ಕೆ ಅನುದಾನ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿದರು. 
 
ಪೈಥಾನ್ ವಾಹನಗಳ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪೈಥಾನ್ ಮಿಶಿನ್‍ಗಳನ್ನು ಎರಡು ವರ್ಷಗಳ ಹಿಂದೆ ತರಲಾಗಿತ್ತು, ಅವನ್ನು ಗುಂಡಿ ಮುಚ್ಚಲು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
 
ನಗರದಲ್ಲಿ ಡೇಂಘಿ ಹೆಚ್ಚಳವಾಗಿದೆ ಎಂಬುದು ನಿಜ. ಆದರೆ ಕಂಟ್ರೋಲ್ ನಲ್ಲಿದೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಗರದಲ್ಲಿ ಇತರೆ ಮಾದರಿಯ ಫ್ಲೂಗಳೂ ಇದೆ, ಇದನ್ನು ನಿಯಂತ್ರಿಸಲು ಹಾಗೂ ಚಿಕಿತ್ಸೆಗೆ ಬಿಬಿಎಂಪಿ ಕ್ರಮವಹಿಸಿದೆ ಎಂದು ಗೌರವ್ ಗುಪ್ತ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments