Webdunia - Bharat's app for daily news and videos

Install App

ಹತ್ತು ದಿನಗಳೊಳಗೆ ರಸ್ತೆ ಗುಂಡಿ ಮುಚ್ಚಬೇಕು

Webdunia
ಶುಕ್ರವಾರ, 1 ಅಕ್ಟೋಬರ್ 2021 (21:33 IST)
ನಗರದಲ್ಲಿ ಮುಖ್ಯ ರಸ್ತೆಗಳ ಗುಂಡಿ ಮುಚ್ಚುವ ಕೆಲಸ ಹತ್ತು ದಿನಗಳ ಒಳಗೆ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದರು. 
 
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿಂದು ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿನ್ನೆ ಕಂದಾಯ ಸಚಿವರ ಮುಂದೆ ರಸ್ತೆ ಪರಿಸ್ಥಿತಿ ಪರಿಶೀಲನೆ ಆಗಿದೆ, ಎಲ್ಲಾ ವಿಚಾರಗಳನ್ನು ವಲಯವಾರು ಮುಖ್ಯ ಅಭಿಯಂತರರು ಮಾಹಿತಿ ಕೊಟ್ಟಿದ್ದಾರೆ. ವಾರ್ಡ್ ರಸ್ತೆಗಳ ಗುಂಡಿಗಳನ್ನು 20 ದಿನಗಳಲ್ಲಿ ಮುಚ್ಚುವಂತೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.
 
ಬೆಂಗಳೂರು ಹೊರವಲಯ ಬಿಡಬ್ಲ್ಯೂಎಸ್‍ಎಸ್‍ಬಿ ಕಾಮಗಾರಿಯಿಂದ ಬಹಳ ಹಾಳಾಗಿದೆ. 2,500 ಕಿ.ಮೀ. ರಸ್ತೆಯನ್ನು ಕತ್ತರಿಸಲಾಗಿದೆ, ಇದಕ್ಕೆ ಅನುದಾನ ನೀಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಹೇಳಿದರು. 
 
ಪೈಥಾನ್ ವಾಹನಗಳ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪೈಥಾನ್ ಮಿಶಿನ್‍ಗಳನ್ನು ಎರಡು ವರ್ಷಗಳ ಹಿಂದೆ ತರಲಾಗಿತ್ತು, ಅವನ್ನು ಗುಂಡಿ ಮುಚ್ಚಲು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
 
ನಗರದಲ್ಲಿ ಡೇಂಘಿ ಹೆಚ್ಚಳವಾಗಿದೆ ಎಂಬುದು ನಿಜ. ಆದರೆ ಕಂಟ್ರೋಲ್ ನಲ್ಲಿದೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ನಗರದಲ್ಲಿ ಇತರೆ ಮಾದರಿಯ ಫ್ಲೂಗಳೂ ಇದೆ, ಇದನ್ನು ನಿಯಂತ್ರಿಸಲು ಹಾಗೂ ಚಿಕಿತ್ಸೆಗೆ ಬಿಬಿಎಂಪಿ ಕ್ರಮವಹಿಸಿದೆ ಎಂದು ಗೌರವ್ ಗುಪ್ತ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments