ರಸ್ತೆ ಗುಂಡಿ ಮುಚ್ಚಲಾಗದೇ ರಾಜ್ಯ ರಾಜಧಾನಿ ಬೆಂಗಳೂರಿನ ಅಂದ ಹಾಳುಮಾಡಿದ್ದ ಪಾಲಿಕೆ

Webdunia
ಬುಧವಾರ, 29 ಜೂನ್ 2022 (19:43 IST)
ರಸ್ತೆ ಗುಂಡಿ ಮುಚ್ಚಲಾಗದೇ ರಾಜ್ಯ ರಾಜಧಾನಿ ಬೆಂಗಳೂರಿನ ಅಂದ ಹಾಳುಮಾಡಿದ್ದ ಪಾಲಿಕೆಗೆ ಇದೀಗ ಹೈಕೋರ್ಟ್ ಬಿಸಿಮುಟ್ಟಿಸಿದೆ. ಕಾದ ಸಮಯದಲ್ಲೇ ಕಬ್ಬಿಣ ಬಡಿಯಬೇಕು ಎನ್ನುವಂತೆ ಹೈಕೋರ್ಟ್ ಬೀಸಿದ ಚಾಟಿಗೆ ಪಾಲಿಕೆ ಕಂಗಾಲಾಗಿಬಿಟ್ಟಿದೆ. ಹೌದು, ಈ ಹಿಂದೆ ಹಲವು ಬಾರಿ ರಸ್ತೆಗುಂಡಿ ಮುಚ್ಚುವ ವಿಚಾರಕ್ಕೆ ನಿರ್ಲಕ್ಷ್ಯ ತೋರಿ ಛೀಮಾರಿ ಹಾಕಿಸಿಕೊಂಡಿದ್ದ ಪಾಲಿಕೆ, ಮತ್ತೆ ಮುಜುಗರಕ್ಕೆ ಒಳಗಾಗಿದೆ. ಮೊನ್ನೆಯಷ್ಟೇ ಇದೇ ವಿಚಾರಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತೆ ಪಾಲಿಕೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ಬೇಕಾದ್ರೆ ಮುಖ್ಯ ಆಯುಕ್ತರನ್ನೇ ಅಮಾನತು ಮಾಡ್ತೀವೆ ಅಂತಾ ಎಚ್ಚರಿಕೆ ನೀಡಿದ್ದಾರೆ. ಇದು ಇದೀಗ ಪಾಲಿಕೆ ಅಧಿಕಾರಿಗಳ ನಿದ್ದೆಗೆಡಿಸಿಬಿಟ್ಟಿದೆ.. ಇತ್ತ ಹೈಕೋರ್ಟ್ ಬಿಸಿ ಮುಟ್ಟಿಸುತ್ತಿದ್ದಂತೆ ಎಚ್ಚೆತ್ತ ತುಷಾರ್ ಗಿರಿನಾಥ್ ಕೂಡ ಎನೇನೋ ಲೆಕ್ಕಚಾರ ಹಾಕೊಂಡು ಕೋರ್ಟ್ ಮುಂದೆ ಹಾಜರಾಗೋಕೆ ಸಿದ್ಧರಾಗಿಬಿಟ್ಟಿದ್ದಾರೆ. ನಾಳೆ ಹೈಕೋರ್ಟ್ ಮುಂದೆ ಏನು ಹೇಳ್ತಾರೆ ಅನ್ನೋ ಕುತೂಹಲ ಎಲ್ಲರಿಗೂ ಕಾಡ್ತಾ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments