Webdunia - Bharat's app for daily news and videos

Install App

ಊಟದ ಬಿಲ್​ ಕೇಳಿದ್ದಕ್ಕೇ ಹಾಸನದ 19 ವರ್ಷದ ಸಪ್ಲೈಯರ್​ಗೆ ಬೆಂಕಿ ಇಟ್ಟ ಕಿರಾತಕರು

Webdunia
ಶನಿವಾರ, 1 ಜನವರಿ 2022 (20:14 IST)
ಬೆಂಗಳೂರು: ಊಟ ಮಾಡಿದ ಬಿಲ್​ ಪಾವತಿಸಿ ಎಂದಿದ್ದಕ್ಕೆ ಪುಂಡರು ಡಾಬಾಗೆ ಪೆಟ್ರೋಲ್​ ಸುರಿದು ಬೆಂಕಿಯಿಟ್ಟ ಪ್ರಕರಣ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
 
ಅಷ್ಟಕ್ಕೂ ನಡೆದಿದ್ದೇನು..?
 
ಬ್ಯಾಲಕೆರೆ ಬಳಿಯಿರುವ ಯೂಟರ್ನ್ ಡಾಬಾದಲ್ಲಿ ಊಟಕ್ಕೆ ಬಂದಿದ್ದ ಪುಂಡರು ಊಟ ಮುಗಿಸಿ ಹೊರಟಿದ್ದಾರೆ.
 
ಈ ವೇಳೆ ಆಗಮಿಸಿದ ಸಪ್ಲೈಯರ್​ ಊಟ ಮಾಡಿದ ಬಿಲ್​ ಪಾವತಿಸಲು ಕೇಳಿದ್ದಾನೆ. ಇದರಿಂದ ಕುಪಿತಗೊಂಡ ದುರುಳರು ಸಪ್ಲೈಯರ್​ಗೆ ಅವಾಜ್​ ಹಾಕಿ ಅಲ್ಲಿಂದ ತೆರಳಿದ್ದಾರೆ. ಆ ಬಳಿಕ ಮಧ್ಯರಾತ್ರಿ 12:30 ಕ್ಕೆ ಡಾಬಾ ಬಳಿ ವಾಪಸ್ ಬಂದಿದ್ದ ಆರೋಪಿಗಳು ಪೆಟ್ರೋಲ್ ತಂದು ಡಾಬಾ ಬಾಗಿಲಿಗೆ ಚಿಲಕ ಹಾಕಿ ಬೆಂಕಿ ಹಚ್ಚಿದ್ದಾರೆ.
 ಇನ್ನು ಈ ವೇಳೆ ಒಳಗಡೆ ಊಟ ಮಾಡುತ್ತಿದ್ದ ಡಾಬಾ ಸಿಬ್ಬಂದಿ ಮನೋಜ್​ ಬೆಂಕಿಯನ್ನು ಕಂಡು ಶಾರ್ಟ್​ ಸರ್ಕ್ಯೂಟ್ ಆಗಿದೆ ಎಂದು ಬಾಗಿಲ ಬಳಿಗೆ ಓಡಿ ಬಂದಿದ್ದಾರೆ. ಈ ವೇಳೆ ಆರೋಪಿಗಳು ಎರಚುತ್ತಿದ್ದ ಪೆಟ್ರೋಲ್​ ಮನೋಜ್​ ಮೇಲೆ ಬಿದ್ದು ಆತನಿಗೂ ಬೆಂಕಿ ಹತ್ತಿಕೊಂಡಿದೆ. ತಕ್ಷಣವೇ ಉಳಿದ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಮನೋಜ್​ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments