Webdunia - Bharat's app for daily news and videos

Install App

ಶಾಲಾ ವಿದ್ಯಾರ್ಥಿ ಮೇಲೆ ಕಂಡಕ್ಟರ್ ನಿಂದ ಹಲ್ಲೆ  

Webdunia
ಶುಕ್ರವಾರ, 14 ಸೆಪ್ಟಂಬರ್ 2018 (18:31 IST)
ಬಸ್ ನಲ್ಲಿ ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳ ಮೇಲೆ ಕಂಡಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ  ಘಟನೆ ನಡೆದಿದೆ.
ಈಶಾನ್ಯ ಸಾರಿಗೆ ಸಂಸ್ಥೆಯ ಯಾದಗಿರಿ ಜಿಲ್ಲೆಯ ಶಹಾಪುರ ವಿಭಾಗದ ಕಂಡಕ್ಟರ್ ನೊಬ್ಬ ಶಾಲಾ ವಿದ್ಯಾರ್ಥಿಗೆ ಥಳಿಸಿದ್ದಾನೆ.

ಶಹಾಪುರನಲ್ಲಿ ಬಸ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಯಾದಗಿರಿಯಿಂದ ಶಹಾಪುರಗೆ ತೆರಳುತ್ತಿದ್ದ ಬಸ್ ಶಹಾಪುರ ತಾಲೂಕಿನ‌ ಗುಂಡಳ್ಳಿ ತಾಂಡಾದ ಕ್ರಾಸ್ ಹತ್ತಿರ ನಿಲ್ಲಿಸಿತ್ತು. ಈ ವೇಳೆ ದೋರನಹಳ್ಳಿ ಕ್ಯಾಂಪ್ ಗೆ ತೆರಳುವ ವಿದ್ಯಾರ್ಥಿಗಳು ಬಸ್ ಹತ್ತಿದ್ದರು. ಆದರೆ ಬಸ್ ದೋರನಹಳ್ಳಿ ಕ್ಯಾಂಪ್ ನಲ್ಲಿ ನಿಲ್ಲಿಸಬೇಕಾಗಿತ್ತು. ಈ ವೇಳೆ ಬಸ್ ನಿಲ್ಲಿಸದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಂಡಕ್ಟರ್ ಅವರನ್ನು ಬಸ್ ನಿಲ್ಲಿಸಿ ಅಂದಿದಕ್ಕೆ  ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಡಕ್ಟರ್ ಹಲ್ಲೆ ಮಾಡಿದ್ದಾನೆ. ನಂತರ ವಿದ್ಯಾರ್ಥಿಗಳನ್ನು ಶಹಾಪುರಗೆ ಕರೆದುಕೊಂಡು ಹೋಗಿದ್ದಾನೆ.

ಆದರೆ ಬೆಳಿಗ್ಗೆ ಶಾಲೆಗೆ ತೆರಳಬೇಕಾದ ವಿದ್ಯಾರ್ಥಿಗಳು ಪೋಷಕರ ಹಾಗೂ ಸಾರ್ವಜನಿಕ ರ ಸಹಾಯದಿಂದ ಮಧ್ಯಾಹ್ನ 2 ಗಂಟೆಗೆ ಶಾಲೆಗೆ ತೆರಳುವಂತಾಗಿದೆ. ಕಂಡಕ್ಟರ್ ನ ಕಾಟದಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments