Webdunia - Bharat's app for daily news and videos

Install App

ನಾಲ್ಕು ಹಸುವಿನ ಕೆಚ್ಚಲನ್ನು ಕೊಯ್ದ ನೀಚಕರು: ಸಚಿವ ಜಮೀರ್‌ ವಿರುದ್ಧ ಮುಗಿಬಿದ್ದ ಮುತಾಲಿಕ್‌

Sampriya
ಭಾನುವಾರ, 12 ಜನವರಿ 2025 (13:38 IST)
Photo Courtesy X
ಧಾರವಾಡ: ಬೆಂಗಳೂರಿನ ಚಾಮರಾಜಪೇಟೆಯ ಒಬ್ಬನ ಮಾಲೀಕತ್ವದಲ್ಲಿ ಇದ್ದ ನಾಲ್ಕು ಹಸುವಿನ ಕೆಚ್ಚಲನ್ನು ನೀಚ ವ್ಯಕ್ತಿಗಳು ಕೊಯ್ದಿದ್ದಾರೆ. ಅಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲಾ, ಅದು ನಮಗೆ ಅನ್ನ ಹಾಕುತ್ತೆ, ಗೊಬ್ಬರ ಕೊಡುತ್ತೆ, ಔಷಧಿ ಕೊಡುತ್ತದೆ. ರೈತರ ಬೆನ್ನೆಲುಬು ಅದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಮುತಾಲಿಕ್‌ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದೆ. ಕಾನೂನು ಇದ್ದರೂ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ಹಿನ್ನೆಲೆಯಲ್ಲಿ ನಿರಂತರ ಗೋಹತ್ಯೆ ಆಗುತ್ತಿದೆ. ನಿರಂತರ ಕಸಾಯಿ ಖಾನೆಗೆ ಹಸು ಹೋಗುತ್ತಿವೆ. ಇವತ್ತು ಅದನ್ನು ತಡೆಯಬೇಕು. ಇವತ್ತು ಆದ ಘಟನೆ ನೋಡಲು ಆಗುತ್ತಿಲ್ಲ. ಅದು ನಮ್ಮ ತಾಯಿ. ಜಮೀರ್‌ಗೆ ಮಾನಾ ಮರ್ಯಾದೆ ಇದ್ದರೇ ರಾಕ್ಷಸಿ ಕೃತ್ಯ ಮಾಡಿದವರನ್ನು ಒದ್ದು ಒಳಗೆ ಹಾಕಿ. ಇಲ್ಲದಿದ್ದರೇ ಹೋರಾಟಕ್ಕೆ ಸಿದ್ದ ಎಂದು ಸವಾಲು ಹಾಕುತ್ತೇನೆ ಎಂದು ಗುಡುಗಿದರು.

ಆಕಳಿನ ಕೆಚ್ಚಲು ಕೊಯ್ದದ್ದನ್ನು ನೋಡಿದರೆ ಮನುಷ್ಯ ನೋಡಿ ಸುಮ್ಮನೆ ಇರಲು ಆಗಲ್ಲ. ಇದನ್ನು ಖಂಡಿಸುತ್ತೇನೆ. ನಿಮ್ಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರ ನೀವೇ ಕೊಡಬೇಕು. ನೀವೇ ಒದ್ದು ಒಳಗೆ ಹಾಕಬೇಕು. ಆ ಕ್ಷೇತ್ರದ ಸಚಿವರು ನೀವು, ಅದು ನಿಮ್ಮ ಜವಾಬ್ದಾರಿ. ಹಿಂದೂ ಜನ ನಿಮಗೆ ವೋಟು ಹಾಕಿದ್ದಾರೆ. ಆ ಹಿಂದೂಗಳಿಗೆ ನ್ಯಾಯ ಒದಗಿಸಬೇಕಾದರೆ ಅವರನ್ನು ಬಂಧಿಸಿ ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments