ಮೂರನೇ ತಪ್ಪಲಿಲ್ಲ ದಿನವೂ ಸರ್ವರ್ ಕಾಟ

Webdunia
ಶನಿವಾರ, 22 ಜುಲೈ 2023 (19:02 IST)
ಬಹು ನಿರೀಕ್ಷೆಯಿಂದ ಕಾಯ್ತಿದ್ದ ಗೃಹಲಕ್ಷ್ಮೀ ಯೋಜನೆಗೂ ಈಗ ಸಮಸ್ಯೆ ಎದುರಾಗಿದೆ. ಗೃಹಲಕ್ಷ್ಮೀಗೆ ಯಾವುದೇ ತೊಡಕಾಗಬಾರದೆಂದು ಕೊಂಚ ಲೇಟಾಗಿ ಚಾಲನೆ ನೀಡಲಾಗುತ್ತಿದ್ದು, ಪ್ರತ್ಯೇಕ ಅಪ್ ರೆಡಿ ಮಾಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾಯ್ತಾ ಇದ್ರೂ. ಕೊನೆಗೂ ಅರ್ಜಿ ಆರಂಭವಾಗಿದ್ರು ಸರ್ವರ್ ಕಾಟ ತಪ್ಪುತ್ತಿಲ್ಲ. ಇಷ್ಟು ದಿನ ಗೃಹಜ್ಯೋತಿ ಆಯ್ತು ಇದೀಗ ಮನೆಯೊಡತಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಸರ್ವರ್ ಸಮಸ್ಯೆ ಕಾಡ್ತಿದೆ. 
ಮೊದಲ ದಿನ ಹೆಚ್ಚು ಸೇವಾಕೇಂದ್ರಗಳಲ್ಲಿ ಸರ್ವರ್‌ ಸಮಸ್ಯೆಯಾಗಿದ್ದ ಹಿನ್ನೆಲೆ ಮಹಿಳೆಯರು ಪರದಾಡಿದ್ರು. ಮೊದಲ ದಿನ 77 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗಿದ್ದು, ಗೃಹಲಕ್ಷ್ಮಿ ಯೋಜನೆ 2ನೇ ದಿನದ ಅಂತ್ಯಕ್ಕೆ 8,81,639 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ ದಿನ ಕೆಲವು ಕಡೆ ಸರ್ವರ್ ಸಮಸ್ಯೆ ಬಗೆ ಹರಿದು ಅರ್ಜಿ ಸಲ್ಲಿಕೆ ಸ್ಪೀಡ್ ಆಗಿತ್ತು. ಆದ್ರೆ ಮುರನೇ ದಿನ ಸರ್ವರ್ ಸಮಸ್ಯೆ ಮತ್ತೆ ತಲೆದೋರಿದೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಇಲಾಖೆಯಿಂದ ಯಾವುದೇ ಗಡುವು ಇಲ್ಲ. ಮಹಿಳೆಯರು ನಿಗದಿ ಪಡಿಸಿದ ದಿನಾಂಕಗಳಂದು ಸೇವಾ ಕೇಂದ್ರಕ್ಕೆ ಹಾಜರಾಗುವಂತೆ ಸೇವಾ ಕೇಂದ್ರಗಳ ಅಧಿಕಾರಿಗಳು ಕೂಡ ಮನವಿ ಮಾಡಿದ್ದಾರೆ. ಇನ್ನು ಸರ್ವರ್ ಕಾಟದಿಂದ ಯಾವ ಕೆಲಸಕ್ಕೂ ಹೋಗದೇ ಬೆಂಗಳೂರು ಒನ್‌ನಲ್ಲಿಯೇ ಮಹಿಳೆಯರು ಕಾದು ಕುಳಿತಿದ್ದು, ಯಜಮಾನಿಯರು ಹೈರಾಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments